ಸೈಬರ್ ರಣತಂತ್ರಕ್ಕೆ ಹೊಸ ಸಂಸ್ಥೆ
ವಿದೇಶಗಳ ಮಾದರಿ ಒಂದೇ ಸಂಸ್ಥೆ ರಚನೆ ಸಂಭವ
Team Udayavani, Nov 14, 2019, 6:15 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದ ಮೇಲೆ ವಿದೇಶಗಳಿಂದ ಸೈಬರ್ ದಾಳಿ ಪ್ರಮಾಣ ಹೆಚ್ಚುತ್ತಲೇ ಇದೆ. ಆದರೆ ಈವರೆಗೆ ಈ ಬಗ್ಗೆ ತನಿಖೆ ನಡೆಸಲು ಒಂದೇ ಒಂದು ಸಂಸ್ಥೆಯಿಲ್ಲ. ಈ “ಅರಾಜಕತೆ’ಗೆ ಕಡಿವಾಣ ಹಾಕಿ “ಸೈಬರ್ ರಣತಂತ್ರ’ ಹೆಣೆಯಲು ಹೊಸ ಸಂಸ್ಥೆಯೊಂದನ್ನು ರೂಪಿಸಲು ಕೇಂದ್ರ ಸರಕಾರ ಚಿಂತಿಸುತ್ತಿದೆ. ಈಚೆಗಷ್ಟೇ ಕುಂಡನ್ಕುಲಂನ ಪರಮಾಣು ವಿದ್ಯುತ್ ಕೇಂದ್ರದ ಮೇಲೆ ಸೈಬರ್ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಸೈಬರ್ ಭಯೋತ್ಪಾದನೆಯನ್ನು ನಿಗ್ರಹಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹಲವು ಪ್ರಮುಖ ರಾಷ್ಟ್ರಗಳಲ್ಲಿ ಸೈಬರ್ ಭಯೋತ್ಪಾದನೆ ತಡೆಯಲು ಹಾಗೂ ಹಿಮ್ಮೆಟ್ಟಿಸಲು ಒಂದೇ ಸಂಸ್ಥೆ ಕಾರ್ಯಾಚರಿಸುತ್ತಿದೆ. ಬ್ರಿಟನ್ನಲ್ಲಿ ಸರಕಾರದ ಸಂವಹನ ಕೇಂದ್ರ ಸೈಬರ್ ಮೂಲ ಸೌಕರ್ಯಗಳ ರಕ್ಷಣೆಯ ಹೊಣೆ ಹೊತ್ತಿದೆ. ಅಮೆರಿಕ ದಲ್ಲಿ ನ್ಯಾಶನಲ್ ಸೆಕ್ಯೂರಿಟಿ ಏಜೆನ್ಸಿ ಹಾಗೂ ಸಿಂಗಾಪುರದಲ್ಲಿ ಸೈಬರ್ ಸೆಕ್ಯೂರಿಟಿ ಏಜೆನ್ಸಿ ಕಾರ್ಯ ನಿರ್ವಹಿಸುತ್ತಿದೆ. ಆದರೆ ಭಾರತದಲ್ಲಿ ಸೈಬರ್ ಅಪರಾಧ, ಭಯೋತ್ಪಾದನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆ ಗಳು ತಮ್ಮದೇ ಆದ ರೀತಿಯಲ್ಲಿ ತನಿಖೆ ನಡೆಸು ತ್ತಿವೆ.
ಏಕೀಕೃತಗೊಂಡ ಸಂಸ್ಥೆ ರಚಿಸುವ ಅಗತ್ಯ ಇದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇದರ ಜವಾಬ್ದಾರಿಯನ್ನು ಈಗ ರಾಷ್ಟ್ರೀಯ ಸೈಬರ್ ಭದ್ರತಾ ಸಂಯೋಜಕ ಲೆ|ಜ| ರಾಜೇಶ್ ಪಂಥ್ ಅವರಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷ ಜಾರಿಗೆ ಬರಲಿರುವ ಸೈಬರ್ ಭದ್ರತಾ ನೀತಿಯಲ್ಲಿ ಈ ಅಂಶ ಸೇರಿಸಿಕೊಳ್ಳಲು ಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಗೋವಾದಲ್ಲಿ ಕ್ರೈಸ್ತ ಪಾದ್ರಿ ಬಂಧನ : ಮತಾಂತರ ಸಹಿಸುವುದಿಲ್ಲ ಎಂದ ಸಿಎಂ ಸಾವಂತ್
ರಾಜ್ಯಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ: ಉಪರಾಷ್ಟ್ರಪತಿ ನಾಯ್ಡು
ಆನ್ಲೈನ್ನಲ್ಲಿ ಪ್ರೀತಿ, ಮದುವೆ : 12 ಲಕ್ಷ ರೂ ವಂಚಿಸಿದ ಮೂರು ಮಕ್ಕಳ ತಾಯಿ
MUST WATCH
ಹೊಸ ಸೇರ್ಪಡೆ
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಬಿಹಾರದಲ್ಲಿ ಅತಿದೊಡ್ಡ ಚಿನ್ನದ ನಿಕ್ಷೇಪ : ಚಿನ್ನದ ಗಣಿಗಾರಿಕೆಗೆ ಅವಕಾಶ ನೀಡಲು ತಯಾರಿ
ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
ಕುಂದಾಪುರ : ಜಾಗದ ವಿಚಾರ ; ದೂರು – ಪ್ರತಿದೂರು
ನೈಜೀರಿಯಾದಲ್ಲಿ ಚರ್ಚ್ನಲ್ಲಿ ಕಾಲ್ತುಳಿತ : 31 ಮಂದಿ ಸಾವು