ಭಾವನೆಗಳನ್ನು ಹಂಚಿಕೊಳ್ಳಲು ಮಾತೃ ಭಾಷೆ ಉತ್ತಮ ಮಾಧ್ಯಮ : ಅಮಿತ್ ಶಾ
"ಅಂತರರಾಷ್ಟ್ರೀಯ ಮಾತೃಭಾಷಾ ದಿನದಂದು ಶುಭಾಶಯಗಳು. ಈ ದಿನ ನಮ್ಮ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕದಲ್ಲಿರಲು ಪ್ರೇರೇಪಿಸುತ್ತದೆ" ಎಂದು ಅಮಿತ್ ಶಾ ಟ್ವೀಟ್
Team Udayavani, Feb 21, 2021, 11:54 AM IST
ನವ ದೆಹಲಿ : ನೂತನ ಶಿಕ್ಷಣ ನೀತಿ, ಭಾರತೀಯ ಎಲ್ಲಾ ಭಾಷೆಗಳ ಸಂರಕ್ಷಣೆ, ಅಭಿವೃದ್ಧಿ, ಸಬಲೀಕರಣಗಳ ಬಗ್ಗೆ ಮೋದಿ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಾತೃ ಭಾಷೆ ದಿನದ ಅಂಗವಾಗಿ ಅವರು ಟ್ವೀಟ್ ಮಾಡಿದ್ದು, ಭಾವನೆಗಳನ್ನು ಹಂಚಿಕೊಳ್ಳಲು ಮಾತೃ ಭಾಷೆ ಉತ್ತಮ ಮಾಧ್ಯಮ ಎಂದು ಹೇಳಿಕೊಂಡಿದ್ದಾರೆ.
ಓದಿ : ಕೋವಿಡ್ ಎರಡನೇ ಅಲೆಯ ಅಪಾಯದ ಹಿನ್ನೆಲೆ : ಆತಿಥ್ಯ ತಾಣಗಳಿಗೆ ಮುನ್ನೆಚ್ಚರಿಕೆ ಸುತ್ತೋಲೆ
ಭಾರತೀಯ ಎಲ್ಲಾ ಭಾಷೆಗಳ ಅಭಿವೃದ್ಧಿ, ಸಂರಕ್ಷಣೆ ಹಾಗೂ ಸಬಲೀಕರಣದ ಬಗ್ಗೆ ಮೋದಿ ಸರ್ಕಾರದ ಬದ್ಧತೆಯನ್ನು ಹೊಂದಿದೆ ಎಂದು ನಮ್ಮ ನೂತನ ಶಿಕ್ಷಣ ನೀತಿಯು ಪ್ರತಿಬಿಂಬಿಸುತ್ತದೆ ಎಂದು ಅಮಿತ್ ಶಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
मातृभाषा अभिव्यक्ति का सशक्त माध्यम व संस्कृति की सजीव संवाहक होती है। यह व्यक्तित्व के निर्माण, विकास और उसकी सामाजिक व सांस्कृतिक पहचान बनाती है।
हमारी नई शिक्षा नीति सभी भारतीय भाषाओं के संरक्षण, विकास व उन्हें सशक्त बनाने की दिशा में मोदी सरकार की प्रतिबद्धता को दर्शाती हैं।
— Amit Shah (@AmitShah) February 21, 2021
ಮಕ್ಕಳಲ್ಲಿ ದೇಶದ ಸಂಸ್ಕೃತಿಯ ಅಡಿಪಾಯವನ್ನು ಬಲಪಡಿಸಲು ಮಾತೃಭಾಷೆಯ ಬಳಕೆಗಾಗಿ ಗರಿಷ್ಠ ಪ್ರಯತ್ನಗಳನ್ನು ಮಾಡಬೇಕು ಎಂದು ಗೃಹ ಸಚಿವರು ಹೇಳಿದ್ದಾರೆ. “ಅಂತರರಾಷ್ಟ್ರೀಯ ಮಾತೃಭಾಷಾ ದಿನದಂದು ಶುಭಾಶಯಗಳು. ಈ ದಿನ ನಮ್ಮ ಸಾಂಸ್ಕೃತಿಕ ಪರಂಪರೆಯೊಂದಿಗೆ ಸಂಪರ್ಕದಲ್ಲಿರಲು ಪ್ರೇರೇಪಿಸುತ್ತದೆ” ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಓದಿ : ಪ್ರಿಯಾಂಕ ಗಾಂಧಿ ವಾದ್ರಾ ಇಂದು ಪ್ರಯಾಗ್ ರಾಜ್ ಗೆ ಭೇಟಿ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ