ತಿರುಚಿದರೆ ಸ್ತಬ್ಧಗೊಳ್ಳುವ ಹೊಸ ಮತಯಂತ್ರ ಖರೀದಿಗೆ ಚಿಂತನೆ


Team Udayavani, Apr 3, 2017, 1:04 PM IST

EVM-3-4.jpg

ಹೊಸದಿಲ್ಲಿ/ ಭೋಪಾಲ್‌: ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚಲಾಗಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೊಸ ತಲೆಮಾರಿನ ಇವಿಎಂಗಳನ್ನು ಖರೀದಿಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ತಿರುಚಲು ಅಥವಾ ಬದಲಾಯಿಸಲು ಯತ್ನಿಸಿದೊಡನೆ ಕೆಲಸ ಮಾಡುವುದನ್ನೇ ನಿಲ್ಲಿಸುವಂಥ ಹೊಸ ರೀತಿಯ ‘ಎಂ3- ಮಾದರಿಯ ಇವಿಎಂ’ಗಳನ್ನು ಖರೀದಿಸಲಾಗುವುದು ಎಂದು ಆಯೋಗ ತಿಳಿಸಿದೆ. ಪಂಚರಾಜ್ಯ ಚುನಾವಣೆ ವೇಳೆ ಮತಯಂತ್ರಗಳ ಒಳಗೆ ಕೈಯಾಡಿಸಲಾಗಿದೆ ಎಂಬ ಆರೋಪ ಕೇಳಿಬಂದ ಬಳಿಕ, ಶನಿವಾರವಷ್ಟೇ ಮಧ್ಯಪ್ರದೇಶದ ಭಿಂಡ್‌ನ‌ಲ್ಲೂ ಯಾವುದೇ ಗುಂಡಿ ಒತ್ತಿದರೂ ಮತ ಬಿಜೆಪಿಗೇ ಹೋಗಿರುವ ಘಟನೆ ವರದಿಯಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಆಯೋಗವು ಹೊಸ ಇವಿಎಂ ಖರೀದಿಗೆ ಮುಂದಾಗಿದೆ.

ಹೇಗಿರುತ್ತೆ ಈ ಇವಿಎಂ?: ಹೊಸ ಯಂತ್ರಗಳ ಖರೀದಿಗೆ ಸುಮಾರು 1,940 ಕೋಟಿ ರೂ. ವೆಚ್ಚವಾಗಲಿದ್ದು, 2018ರ ವೇಳೆಗೆ ಇವುಗಳನ್ನು ಪರಿಚಯಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವಾಲಯ ಮಾಹಿತಿ ನೀಡಿದೆ. ಎಂ3- ಟೈಪ್‌ ಇವಿಎಂಗಳಲ್ಲಿ ಯಂತ್ರಗಳ ಸಾಚಾತನವನ್ನು ದೃಢೀಕರಿಸುವ ವ್ಯವಸ್ಥೆಯಿರುತ್ತದೆ. ಪರಮಾಣು ಇಂಧನ ಪಿಎಸ್‌ಯು ಇಸಿಐಎಲ್‌ ಅಥವಾ ರಕ್ಷಣಾ ಪಿಎಸ್‌ಯು ಆಗಿರುವ ಬಿಇಎಲ್‌ ಕಂಪೆನಿಗಳು ತಯಾರಿಸಿದ ಇವಿಎಂಗಳು ಮಾತ್ರವೇ ಇತರ ಇವಿಎಂಗಳೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯ. ಹಾಗಾಗಿ, ಬೇರೆ ಯಾವುದೇ ಕಂಪೆನಿಯ ಇವಿಎಂಗಳನ್ನೂ ಇಲ್ಲಿ ಬಳಸಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಆಪ್‌ – ಆಯೋಗ ವಾಗ್ಯುದ್ಧ
ಇನ್ನೊಂದೆಡೆ, ಇವಿಎಂ ಅಕ್ರಮಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷ ಮತ್ತು ಚುನಾವಣಾ ಆಯೋಗದ ನಡುವೆ ವಾಕ್ಸಮರ ಆರಂಭವಾಗಿದೆ. ‘ಪಂಜಾಬ್‌ ಚುನಾವಣೆ ವೇಳೆ ಇವಿಎಂ ಅನ್ನು ತಿರುಚಿದ್ದರಿಂದಲೇ ಆಪ್‌ ಸೋಲಬೇಕಾಯಿತು. ಹೀಗಾಗಿ, ಫ‌ಲಿತಾಂಶವನ್ನು ಮತ ದೃಢೀಕರಣ ಪತ್ರಗಳೊಂದಿಗೆ ಹೋಲಿಕೆ ಮಾಡಿ ನೋಡಿ ಎಂದು ನಾವು ಪಂಜಾಬ್‌ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೆ, ಅವರು ನಮ್ಮ ಮನವಿಯನ್ನು ತಿರಸ್ಕರಿಸಿದ್ದಾರೆ. ಇದು ಅವರ ಪಕ್ಷಪಾತೀಯ ಧೋರಣೆಯನ್ನು ತೋರಿಸುತ್ತದೆ’ ಎಂದು ಆಪ್‌ ಆರೋಪಿಸಿದೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಆಯೋಗ, ‘ನಿಮಗೆ ಅಷ್ಟೊಂದು ಅನುಮಾನ ಇದ್ದರೆ ರಾಜ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ. ಪಂಜಾಬ್‌ನಲ್ಲಿ ಗೆಲ್ಲುವ ನಿರೀಕ್ಷೆಯಿದ್ದರೂ ಸೋತಿದ್ದೇಕೆ ಎಂಬುದನ್ನು ನೀವು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಿ. ಅದರ ಬದಲು ನಿಮ್ಮ ಸೋಲಿನ ಹೊಣೆಯನ್ನು ಇವಿಎಂ ಮೇಲೆ ಹೊರಿಸಬೇಡಿ’ ಎಂದಿದೆ.

ಇದಕ್ಕೆ ತಿರುಗೇಟು ನೀಡಿರುವ ಆಮ್‌ ಆದ್ಮಿ ಪಕ್ಷ, ‘ಇವಿಎಂ ತಿರುಚಿರುವ ವಿಚಾರಕ್ಕೆ ಸಂಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವ ಬದಲು ಚುನಾವಣಾ ಆಯೋಗವು ರಾಜಕೀಯ ಹೇಳಿಕೆಗಳನ್ನು ನೀಡುತ್ತಿರುವುದು ದುರದೃಷ್ಟಕರ. ಭಿಂಡಿಯಲ್ಲಿ ನಡೆದ ಘಟನೆಯು ಚುನಾವಣಾ ಆಯೋಗದ ನಿಷ್ಪಕ್ಷಪಾತದ ಕುರಿತ ಲಕ್ಷಾಂತರ ಮತದಾರರ ನಂಬಿಕೆಯನ್ನೇ ಪ್ರಶ್ನಿಸುವಂತೆ ಮಾಡಿದೆ’ ಎಂದು ಹೇಳಿದೆ.

ಮತಗಳೆಲ್ಲ ಕಮಲಕ್ಕೆ; ಭಿಂಡ್‌ ಡಿಎಂ, ಎಸ್ಪಿ ಎತ್ತಂಗಡಿ
ಇವಿಎಂ ಡೆಮೋ ವೇಳೆ ಯಾವುದೇ ಗುಂಡಿ ಒತ್ತಿದರೂ ಮತಗಳು ಬಿಜೆಪಿಗೇ ಬೀಳುತ್ತಿದ್ದ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಭಿಂಡ್‌ನ‌ ಜಿಲ್ಲಾಧಿಕಾರಿ ಮತ್ತು ಎಸ್ಪಿಯನ್ನು ಅಲ್ಲಿಂದ ಎತ್ತಂಗಡಿ ಮಾಡಿ ಮಧ್ಯಪ್ರದೇಶ ಸರಕಾರ ರವಿವಾರ ಆದೇಶ ಹೊರಡಿಸಿದೆ. ಜತೆಗೆ, 19 ಮಂದಿಯ ವಿರುದ್ಧ ಕ್ರಮವನ್ನೂ ಕೈಗೊಳ್ಳಲಾಗಿದೆ. ಎ.9ರಂದು ಭಿಂಡ್‌ನ‌ ಅಟೇರ್‌ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಈ ಕುರಿತು ವರದಿ ನೀಡುವಂತೆ ಭಿಂಡ್‌ನ‌ 21 ಅಧಿಕಾರಿಗಳಿಗೂ ಚುನಾವಣಾ ಆಯೋಗ ಸೂಚಿಸಿತ್ತು.

ಪಂಜಾಬ್‌ನಲ್ಲಿ ನಾವು ಸೋತೆವು. ಉತ್ತರಪ್ರದೇಶದಲ್ಲಿ ಎಸ್ಪಿ ಸೋತಿತು. ಎರಡೂ ರಾಜ್ಯಗಳಲ್ಲೂ ಜಿಲ್ಲಾಧಿಕಾರಿಗಳ ಮೇಲ್ವಿಚಾರಣೆಯಲ್ಲೇ ಇವಿಎಂಗಳಿದ್ದವು. ನಮಗೆ ಚುನಾವಣಾ ಆಯೋಗದ ಮೇಲೆ ಸಂಪೂರ್ಣ ನಂಬಿಕೆಯಿದೆ.
– ಭೂಪೇಂದ್ರ ಯಾದವ್‌, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.