ಹೊಸ ಸರಕಾರ ರಚನೆಗೆ ಉತ್ಸಾಹ


Team Udayavani, May 4, 2021, 6:50 AM IST

ಹೊಸ ಸರಕಾರ ರಚನೆಗೆ ಉತ್ಸಾಹ

ತಿರುವನಂತಪುರ/ಚೆನ್ನೈ/ಗುವಾಹಟಿ: ಪಂಚರಾಜ್ಯಗಳ ಚುನಾವಣಾ ಫ‌ಲಿತಾಂಶ ಹೊರಬಿದ್ದ ಮರುದಿನವೇ ಆಯಾ ರಾಜ್ಯಗಳಲ್ಲಿ ನೂತನ ಸರಕಾರ ರಚನೆ ಪಕ್ರಿಯೆಗಳು ಶುರುವಾಗಿವೆ. ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ತಮ್ಮ ಸ್ಥಾನಕ್ಕೆ ಔಪಚಾರಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಮಂಗಳವಾರ ಸಂಪುಟ ಸದಸ್ಯರ ಬಗ್ಗೆ ಎಲ್‌ಡಿಎಫ್ ಒಕ್ಕೂಟದ ಪದಾಧಿಕಾರಿಗಳ ಸಭೆ ನಡೆಯಲಿದೆ. ಅಸ್ಸಾಂನಲ್ಲಿ ಸಿಎಂ ಗಾದಿಗೆ ಹಾಲಿ ಸಿಎಂ ಸರ್ಬಾನಂದ ಸೊನೊವಾಲ್‌ ಹಾಗೂ ಹಿಮಂತ ಬಿಸ್ವಾ ನಡುವೆ ಸ್ಪರ್ಧೆ ಏರ್ಪಟ್ಟಿದೆ.

ಪಿಣರಾಯಿ ರಾಜೀನಾಮೆ: ಅಧಿಕಾರ ಉಳಿಸಿಕೊಂಡ ಎಲ್‌ಡಿಎಫ್ ಒಕ್ಕೂಟದ ಪರವಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಸೋಮವಾರ  ರಾಜಭವನಕ್ಕೆ ತೆರಳಿ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಔಪಚಾರಿಕವಾಗಿ ರಾಜ್ಯಪಾಲರು ಮುಂದಿನ ಸರಕಾರ ಅಸ್ತಿತ್ವಕ್ಕೆ ಬರುವವರೆಗೆ ಹಂಗಾಮಿ ಮುಖ್ಯಮಂತ್ರಿ ಯಾಗಿರುವಂತೆ ಪಿಣರಾಯಿ ಅವರಿಗೆ ಸೂಚಿಸಿದರು.

ಈ ನಡುವೆ ಎಲ್‌ಡಿಎಫ್ನ ಪ್ರಮುಖ ಪಕ್ಷವಾದ ಸಿಪಿಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಲ್‌ಡಿಎಫ್ ರಾಜ್ಯ ಸಮಿತಿಯ ನಡುವಿನ ಸಭೆ ಮಂಗಳವಾರಕ್ಕೆ ನಿಗದಿಯಾಗಿದೆ. ಸಭೆಯಲ್ಲಿ, ನೂತನ ಸಂಪುಟ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಅದಾದ ಅನಂತರ ರಾಜಭವನದಲ್ಲಿ ಮೊದಲು ಮುಖ್ಯಮಂತ್ರಿಗಳ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದ್ದು ತದನಂತರದ ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಡಿಎಂಕೆ ಸಭೆ: ನೂತವಾಗಿ ಆಯ್ಕೆಯಾಗಿರುವ ಡಿಎಂಕೆಯ ಚುನಾಯಿತ ಪ್ರತಿನಿಧಿಗಳು ಮಂಗಳವಾರ ಚೆನ್ನೈನಲ್ಲಿ ಸಭೆ ಸೇರಲಿದ್ದಾರೆ. ಅಲ್ಲಿ ಎಂ.ಕೆ.ಸ್ಟಾಲಿನ್‌ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆರಿಸುವ ಔಪಚಾರಿಕ ಪ್ರಕ್ರಿಯೆ ನಡೆಯಲಿದೆ. 25 ವರ್ಷಗಳಲ್ಲಿ ಡಿಎಂಕೆ, ಪೂರ್ಣ ಬಹುಮತದೊಂದಿಗೆ ಸರಕಾರ ರಚಿಸುತ್ತಿರುವುದು ಇದೇ ಮೊದಲು.  ಇದೇ ವೇಳೆ ಅಧಿಕಾರ ಕಳೆದುಕೊಂಡಿರುವ ಎಐಎಡಿಎಂಕೆಯ ಹೊಸ ಚುನಾಯಿತ ಪ್ರತಿನಿಧಿಗಳು ಮೇ 7ರಂದು ಚೆನ್ನೈನಲ್ಲಿ ಸಭೆ ಸೇರಲಿದ್ದಾರೆ

ನಿರ್ಬಂಧ ಹೇರಲಾಗದು: ಸುಪ್ರೀಂ ಕೋರ್ಟ್‌: “ವಿಚಾರಣೆ ವೇಳೆ ಹೈಕೋರ್ಟ್‌ಗಳು ವ್ಯಕ್ತಪಡಿಸುವ ಮೌಖೀಕ ಅಭಿಪ್ರಾಯಗಳನ್ನು ವರದಿ ಮಾಡುವಂತಿಲ್ಲ ಎಂದು ನಾವು ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗದು. ಅಲ್ಲದೇ ಪ್ರಜಾಸತ್ತೆಯ ಪ್ರಮುಖ ಸ್ತಂಭವಾಗಿರುವ ಹೈಕೋ ರ್ಟ್‌ಗಳ ಸ್ಥೈರ್ಯಗೆಡಿಸುವ ಕೆಲಸವನ್ನೂ ಮಾಡಲಾಗದು’ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ಬಿಜೆಪಿ ವಿರೋಧಿ ರಂಗಕ್ಕೆ ದೀದಿ ನಾಯಕಿ?: ತಮ್ಮ ಬದುಕಿನಲ್ಲೇ ಅತ್ಯಂತ ನಿರ್ಣಾಯಕ ಹಾಗೂ ಮಹತ್ವದ ಚುನಾವಣೆಯಲ್ಲಿ ಗೆದ್ದು ಬೀಗಿರುವ ದೀದಿ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ರಂಗಕ್ಕೆ ನಾಯಕಿಯಾಗಲಿದ್ದಾರೆಯೇ?  ಪ್ರಧಾನಿ ಮೋದಿಯವರ 15 ರ್ಯಾಲಿಗಳು, 28 ದಿನಗಳಲ್ಲಿ ಅಮಿತ್‌ ಶಾ ಅವರ 62 ರ್ಯಾಲಿಗಳು, ಕೇಂದ್ರ ಸಂಪುಟ ಸಚಿವರನ್ನು ಏಕಾಂಗಿಯಾಗಿ  ಎದುರಿಸಿದ ದೀದಿ ಭರ್ಜರಿ ಜಯ ಗಳಿಸಿದ್ದಾರೆ. ಹೀಗಾಗಿ 2024ರ ಲೋಕಸಭೆ ಚುನಾವಣೆ ವೇಳೆ ಮಮತಾ ಅವರು ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಿ, ಬಿಜೆಪಿಯನ್ನು ಎದುರಿಸಲು ಚಿಂತನೆ ನಡೆಸಿದ್ದಾರೆಯೇ ಎಂಬ ವಿಶ್ಲೇಷಣೆಯೂ ಶುರುವಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಗಾದಿ ಯಾರಿಗೆ? :

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಲ, ಪುದುಚೇರಿಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದಕ್ಕೆ ಈಗಾಗಲೇ ಸ್ಪಷ್ಟ ಉತ್ತರ ಸಿಕ್ಕಿದೆ. ಆದರೆ ಅಸ್ಸಾಂನಲ್ಲಿ ಈ ಬಗ್ಗೆ ಕೊಂಚ ಗೊಂದಲ ವೇರ್ಪಟ್ಟಿದೆ. ಈ ವರೆಗೆ ಅಲ್ಲಿ ಮುಖ್ಯಮಂತ್ರಿಯಾಗಿದ್ದ ಸರ್ಬಾನಂದ ಸೊನೊವಾಲ್‌ ಹಾಗೂ ಕಳೆದ ಚುನಾವಣೆಯಲ್ಲಿ ಹಾಗೂ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿರುವ ಪಕ್ಷದ ಹಿರಿಯ ನಾಯಕ ಹಿಮಂತ ಬಿಸ್ವ ಶರ್ಮಾ ಅವರ ನಡುವೆ ಸಿಎಂ ಪಟ್ಟ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಏರ್ಪಟ್ಟಿದೆ. ಸೋಮವಾರ ಮಾತನಾಡಿದ ಪಕ್ಷದ ಹಿರಿಯ ನಾಯಕ ಜಿತೇಂದ್ರ ಸಿಂಗ್‌, ಅಸ್ಸಾಂನಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಇನ್ನೂ ಬಿಜೆಪಿ ಹೈಕಮಾಂಡ್‌ ನಿರ್ಧರಿಸಿಲ್ಲ. ಆದರೆ ಯಾರನ್ನೇ  ಆರಿಸಿದರೂ ಅದು ಪ್ರಜಾಪ್ರಭುತ್ವ ಮಾದರಿಯಲ್ಲೇ ಆಯ್ಕೆ ಮಾಡಲಾಗುತ್ತದೆ ಎಂದಿದ್ದಾರೆ.

ವಿಧಾನಸಭೆಗೆ ಮೊದಲ ಬಾರಿ “ಮಾವ-ಅಳಿಯ’ :

ಕೇರಳದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾವ, ಅಳಿಯ ವಿಧಾನಸಭೆ ಪ್ರವೇಶಿಸಿದ ಹೆಗ್ಗಳಿಕೆಗೆ ಹಂಗಾಮಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹಾಗೂ ಅವರ ಅಳಿಯ ಪಿ.ಎ. ಮೊಹಮ್ಮದ್‌ ರಿಯಾಜ್‌ ಭಾಜನರಾಗಿದ್ದಾರೆ. ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಪಕ್ಷದ ಅಧ್ಯಕ್ಷರೂ ಆಗಿರುವ ರಿಯಾಜ್‌, ಪಿಣರಾಯಿ ಪುತ್ರಿ ವೀಣಾ ಅವರ ಪತಿ. ವೀಣಾ ಅವರು ಬೆಂಗಳೂರಿನಲ್ಲಿ ಐಟಿ ಉದ್ಯಮಿಯಾಗಿದ್ದಾರೆ. ವಿಜಯನ್‌ ಕಣ್ಣೂರು ಜಿಲ್ಲೆಯ ಧರ್ಮದಂ ಕ್ಷೇತ್ರದಿಂದ  ಆಯ್ಕೆಯಾಗಿದ್ದರೆ, ರಿಯಾಜ್‌ ಕಲ್ಲಿಕೋಟೆಯ ಬೆಯ್‌ಪುರೆ ಕ್ಷೇತ್ರದಿಂದ ಗೆದ್ದಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.