ಜಮ್ಮು ಕಾಶ್ಮೀರಕ್ಕೆ ಹೊಸ ಮನ್ವಂತರ
ಲೋಕಸಭೆಯಲ್ಲೂ ವಿಧೇಯಕಕ್ಕೆ ಮನ್ನಣೆ
Team Udayavani, Aug 7, 2019, 6:00 AM IST
ಮಸೂದೆಗೆ ಒಪ್ಪಿಗೆ ಸಿಕ್ಕ ಬಳಿಕ ಶಾಗೆ ಮೋದಿ ಅಭಿನಂದನೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಹೊಸ ಇತಿಹಾಸ ಬರೆದಿರುವ ಕೇಂದ್ರ ಸರ್ಕಾರ, ಈ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ಮತ್ತು 35(ಎ)ಪರಿಚ್ಛೇದವನ್ನು ಬದಿಗೆ ಸರಿಸುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಲೋಕಸಭೆಯಲ್ಲೂ ಈ ಎರಡೂ ಮಸೂದೆಗಳಿಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ವಿಧೇಯಕದ ಪರವಾಗಿ 370 ಮತ್ತು ವಿರುದ್ಧವಾಗಿ 70 ಮತಗಳು ಬಿದ್ದಿವೆ. ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಅಮಿತ್ ಶಾ ಸೇರಿದಂತೆ ಎಲ್ಲ ಸಂಸದರನ್ನು ಶ್ಲಾಘಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಐತಿಹಾಸಿಕ ನಿರ್ಧಾರದಿಂದ ಗಲಿಬಿಲಿಗೊಂಡಿರುವ ನೆರೆಯ ಪಾಕಿಸ್ತಾನ ಯುದ್ಧದ ಮಾತುಗಳನ್ನಾಡಿದೆ. ಅಂತಾರಾಷ್ಟ್ರೀಯ ಸಮುದಾಯದ ಬೆಂಬಲ ಕೋರಿತಾದರೂ, ಅಮೆರಿಕ, ಯುಎಇಯಂಥ ದೇಶಗಳು ಇದು ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರ ಎಂದು ಹೇಳುವ ಮೂಲಕ ಪಾಕ್ಗೆ ಭ್ರಮ ನಿರಸನಗೊಳಿಸಿವೆ.
ಸೋಮವಾರವಷ್ಟೇ ರಾಜ್ಯಸಭೆಯಲ್ಲಿ ಸುದೀರ್ಘ ಚರ್ಚೆ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ ಹಿಂತೆಗೆತ ಮಸೂದೆ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವ ಮಸೂದೆಗೆ ಒಪ್ಪಿಗೆ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮಂಗಳವಾರ ಬೆಳಗ್ಗೆಯೇ ಲೋಕಸಭೆಯಲ್ಲೂ ಈ ಎರಡೂ ಮಸೂದೆಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷ ಸ್ಥಾನಮಾನ ತೆಗೆಯುವ ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವ ನಿರ್ಧಾರವನ್ನು ಯಾರಿಂದರೂ ತಡೆಯಲು ಸಾಧ್ಯವಿಲ್ಲ ಎಂದೂ ಖಡಕ್ಕಾಗಿಯೇ ಹೇಳಿದರು. ಜಮ್ಮು ಕಾಶ್ಮೀರದ ಬಗ್ಗೆ ಮಾತನಾಡುವಾಗ ಇದರಲ್ಲಿ ಪಿಒಕೆ ಮತ್ತು ಚೀನಾ ಆಕ್ರಮಿತ ಆಕ್ಸಾಯ್ ಚಿನ್ ಕೂಡ ಬರುತ್ತವೆ ಎಂದೂ ಸ್ಪಷ್ಟಪಡಿಸಿದರು.
ಚೀನಾ ಅಪಸ್ವರ
• ನರೇಂದ್ರ ಮೋದಿ, ಪ್ರಧಾನಿ
• ಅಮಿತ್ ಶಾ, ಕೇಂದ್ರ ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ