ಪದ್ಮ ಪ್ರಶಸ್ತಿ ಮಾದರಿಯಲ್ಲಿ ಹೊಸ ರಾಷ್ಟ್ರೀಯ ಪ್ರಶಸ್ತಿ
Team Udayavani, Dec 24, 2018, 6:15 AM IST
ಹೊಸದಿಲ್ಲಿ: ರಾಷ್ಟ್ರೀಯ ಏಕತೆಗಾಗಿ ದುಡಿದವರನ್ನು ಗೌರವಿಸಲೋಸುಗ ಹೊಸ ಪ್ರಶಸ್ತಿ ಸ್ಥಾಪನೆಯ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ.
ಪದ್ಮ ಪ್ರಶಸ್ತಿಗಳ ಮಾದರಿಯಲ್ಲಿಯೇ ಹೊಸ ಪ್ರಶಸ್ತಿ ಇರಲಿದೆ. ರಾಷ್ಟ್ರೀಯ ಏಕತೆಗೆ ಯಾವುದೇ ರೀತಿಯಲ್ಲಿ ಕೆಲಸ ಮಾಡಿದ, ಶ್ರಮಿಸಿದ ಭಾರತೀಯರಿಗೆ ಈ ಗೌರವ ನೀಡಲಾಗುತ್ತದೆ. ದೇಶದ ಏಕತೆಗಾಗಿ ದುಡಿದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ರ ಸ್ಫೂರ್ತಿಯಿಂದ ಈ ಪ್ರಶಸ್ತಿ ಸ್ಥಾಪಿಸಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ನರ್ಮದಾ ಜಿಲ್ಲೆಯ ಕೇವಡಿಯಾದಲ್ಲಿ ಆಯೋಜಿಸಲಾಗಿದ್ದ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಮ್ಮೇಳನದ ಸಮಾರೋಪದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ರಾಷ್ಟ್ರೀಯ ಪೊಲೀಸ್ ಸ್ಮಾರಕದ ಬಗ್ಗೆ ವಿಶೇಷ ಅಂಚೆ ಚೀಟಿಯನ್ನು ಪ್ರಧಾನಿ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದ್ದಾರೆ. ಇದರೊಂದಿಗೆ ಪ್ರತಿ ವರ್ಷದ ಅ.31ರಂದು ಏಕತಾ ಪ್ರತಿಮೆ ಬಳಿ ಮೂರು ಅಥವಾ ನಾಲ್ಕು ರಾಜ್ಯಗಳ ಪೊಲೀಸ್ ಪಡೆ ಜತೆ ಸೇರಿ ಪರೇಡ್ ನಡೆಸಬೇಕು. ಪಟೇಲ್ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನ’ ಎಂದು ಆಚರಿಸಬೇಕು ಎಂದು ಸಲಹೆ ಮಾಡಿದ್ದಾರೆ ಪ್ರಧಾನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್