ಶೀಘ್ರ ಭಾರತ-ಕಾಠ್ಮಂಡು ರೈಲ್ವೇ ಲೈನ್‌ ನಿರ್ಮಾಣ: ಪ್ರಧಾನಿ ಮೋದಿ


Team Udayavani, Apr 7, 2018, 4:17 PM IST

Modi-Oli-700.jpg

ಹೊಸದಿಲ್ಲಿ : ಭಾರತವನ್ನು ಕಾಠ್ಮಂಡು ಜತೆಗೆ ಜೋಡಿಸುವ ಹೊಸ ರೈಲ್ವೆ ಲೈನ್‌ ನಿರ್ಮಾಣಕ್ಕೆ ಭಾರತ- ನೇಪಾಲ ಒಪ್ಪಿಕೊಂಡಿದ್ದು  ಶೀಘ್ರವೇ ಈ ಯೋಜನೆ ಅನುಷ್ಠಾನವಾಗಲಿದೆ  ಪ್ರಧಾನಿ ನರೇಂದ್ರ ಮೋದಿ ಅವರಿಂದು ಶನಿವಾರ ಹೇಳಿದ್ದಾರೆ.

ಅಲ್ಲದೇ ಉಭಯ ದೇಶಗಳ ನಡುವಿನ ಎಲ್ಲ ಸಂಪರ್ಕ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವುದಕ್ಕೆ ಉಭಯ ದೇಶಗಳು ಒಪ್ಪಿಕೊಂಡಿರುವಾಗಿ ಪ್ರಧಾನಿ ಮೋದಿ ಅವರು ನೇಪಾಲ ಪ್ರದಾನಿ ಕೆ ಪಿ ಓಲಿ ಅವರೊಂದಿಗೆ ನಡೆಸಿಕೊಟ್ಟ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಪ್ರಕಟಿಸಿದರು. 

“ನೇಪಾಲದೊಂದಿಗೆ ನಾವು ರೈಲು ಮತ್ತು ಜಲಮಾರ್ಗಗಳನ್ನು ಸುಧಾರಿಸುವ ಉದ್ದೇಶ ಹೊಂದಿದ್ದೇವೆ. ಭದ್ರತೆಯ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ನಡುವಿನ ಬಲವಾದ ಸಂಬಂಧಗಳಿವೆ. ಅಂತೆಯೇ ನಮ್ಮ ನಡುವಿನ ಮುಕ್ತ ಗಡಿಗಳ ದುರ್ಬಳಕೆಯನ್ನು ನಿಲ್ಲಿಸುವುದಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಪ್ರಧಾನಿ ಮೋದಿ ಹೇಳಿದರು. 

ನೇಪಾಲ ಪ್ರಧಾನಿ ಓಲಿ ಅವರು ಮಾತನಾಡುತ್ತಾ, ‘ಭಾರತದೊಂದಿಗೆ ಸಂಬಂಧಗಳಿಗೆ ನೇಪಾಲ ಅತ್ಯಧಿಕ ಮಹತ್ವವನ್ನು ಕೊಡುತ್ತದೆ; ನಮ್ಮ ನಡುವೆ ಐತಿಹಾಸಿಕ ಮತ್ತು ಪ್ರಾಕ್ತನ ಸಂಬಂಧಗಳಿವೆ. ಪರಸ್ಪರರು ಕೊಟ್ಟು ಪಡೆಯುವಂತಹ ಅನೇಕ ವಿಷಯಗಳು ಇವೆ. ಸಾಧ್ಯವಿರುವಷ್ಟು ಬೇಗನೆ ನೇಪಾಲಕ್ಕೆ ಬನ್ನಿ ಎಂದು ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದೇನೆ. ಅಂತೆಯೇ ಅವರ ಭೇಟಿ ಶೀಘ್ರವೇ ಸಾಧ್ಯವಾಗಲೆಂದು ಹಾರೈಸುತ್ತೇನೆ’ ಎಂದು ಹೇಳಿದರು.

ಉಭಯ ನಾಯಕರು ಅನೇಕ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಸುಧಾರಿಸುವ ಮತ್ತು ಮೇಲ್ಮಟ್ಟಕ್ಕೆ ಒಯ್ಯುವ ನಿಟ್ಟಿನಲ್ಲಿ  ಮಾತುಕತೆ ನಡೆಸಿದರು. ಮೋದಿ ಅವರು ನಿನ್ನೆ ಶುಕ್ರವಾರ ನೇಪಾಲಿ ಪ್ರಧಾನಿ ಓಲಿ ಅವರನ್ನು ದಿಲ್ಲಿಯಲ್ಲಿನ ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ಭೇಟಿಯಾದರು. 

ನೇಪಾಲ ಪ್ರಧಾನಿ ಇಂದು ಶನಿವಾರ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರನ್ನು ಭೇಟಿಯಾದರು. ಓಲಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಭವ್ಯ ಸ್ವಾಗತ ನೀಡಲಾಯಿತು. 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.