ರೈಲು ಪ್ರಯಾಣಿಕರಿಗೆ ‘ವಿಶೇಷ’ ಕೊಡುಗೆ ‘ವಿಕಲ್ಪ್’
Team Udayavani, Mar 24, 2017, 12:38 PM IST
ಹೊಸದಿಲ್ಲಿ: ನೀವು ಬೆಂಗಳೂರಿನಿಂದ ದೆಹಲಿಗೆ ಹೋಗಲು ಎಕ್ಸ್ಪ್ರೆಸ್ ರೈಲಿಗೆ ಮುಂಗಡ ಬುಕಿಂಗ್ ಮಾಡಿ, ವೇಯ್ಟಿಂಗ್ ಲಿಸ್ಟ್ನಲ್ಲಿ ಕಾಯುತ್ತಿದ್ದೀರಾ? ಹಾಗಾದರೆ ನಿಮಗೆ ಈಗ ರಾಜಧಾನಿ, ಶತಾಬ್ದಿ ಅಥವಾ ಇತರ ವಿಶೇಷ ರೈಲಿನಲ್ಲಿ ಸೀಟು ಸಿಗುವುದು ಗ್ಯಾರಂಟಿ. ಅದೂ ಕೂಡ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ! ಹೌದು, ಮುಂಗಡ ಟಿಕೆಟ್ ಕಾಯ್ದಿರಿಸುವ ರೈಲು ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಮುಂದಾಗಿರುವ ರೈಲ್ವೇ ಇಲಾಖೆ, ಇದೇ ಎಪ್ರಿಲ್ 1ರಿಂದ ‘ವಿಕಲ್ಪ್’ ಎಂಬ ಹೊಸ ಸೀಟು ಕಾಯ್ದಿರಿಸುವಿಕೆ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ.
ವಿಕಲ್ಪ್ ವ್ಯವಸ್ಥೆ ಅಡಿ ಇ-ಟಿಕೆಟ್ ಕಾಯ್ದಿರಿಸುವ ಪ್ರಯಾಣಿಕರು ವೇಯ್ಟಿಂಗ್ ಲಿಸ್ಟ್ನಲ್ಲಿದ್ದರೆ, ಅವರು ಹೋಗಬೇಕಿರುವ ಸ್ಥಳಕ್ಕೆ ತೆರಳುವ ಶತಾಬ್ದಿ, ಸುವಿಧಾ ರೀತಿಯ ವಿಶೇಷ ರೈಲುಗಳಲ್ಲಿ ಸೀಟು ಕೊಡಿಸಲಾಗುತ್ತದೆ. ಇದಕ್ಕೆ ಇಲಾಖೆ ಯಾವುದೇ ಹೆಚ್ಚುವರಿ ಶುಲ್ಕ ಪಡೆಯುವುದಿಲ್ಲ. ಈ ಸೌಲಭ್ಯ ಪಡೆಯಲು ಇ-ಟಿಕೆಟ್ ಬುಕ್ ಮಾಡುವುದು ಕಡ್ಡಾಯ. ಮೊದಲು ಬುಕ್ ಮಾಡಿದ ರೈಲಿನಲ್ಲಿ ಎಲ್ಲ ಸೀಟುಗಳು ತುಂಬಿದ ನಂತರವಷ್ಟೇ ವಿಶೇಷ ರೈಲುಗಳಲ್ಲಿ ಸೀಟು ನೀಡುವ ಪ್ರಕ್ರಿಯೆ ಆರಂಭವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ