ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ
Team Udayavani, Nov 17, 2022, 9:21 PM IST
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ. ಹೀಗಾಗಿ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಶೀಘ್ರದಲ್ಲಿಯೇ ಮತ್ತೆ ಬಿರುಸಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಅಂಡಮಾನ್ ಸಮುದ್ರ ವ್ಯಾಪ್ತಿಯಲ್ಲಿ ನ.16ರಂದು ವಾಯುಭಾರ ಕುಸಿತ ಉಂಟಾಗಿದೆ. ಅದು ಮುಂದಿನ ದಿನಗಳಲ್ಲಿ ಪಶ್ಚಿಮ ಮತ್ತು ವಾಯವ್ಯ ಪ್ರದೇಶಗಳತ್ತ ಮುಂದುವರಿಯಲಿದೆ. ನ.19ರ ವೇಳೆಗೆ ಬಂಗಾಳಕೊಲ್ಲಿಯ ದಕ್ಷಿಣ ಭಾಗದತ್ತ ಪ್ರವೇಶಿಸಲಿದೆ.