ನವಜಾತ ಶಿಶುವನ್ನುಬಾಣಲೆಯಲ್ಲಿ ಹಾಕಿ ಯಮುನಾ ನದಿಯಲ್ಲಿ ತೇಲಿ ಬಿಟ್ಟ ಕ್ರೂರಿಗಳು..!
Team Udayavani, May 7, 2021, 9:05 AM IST
ಮಥುರಾ : ನವಜಾತ ಶಿಶುವೊಂದನ್ನು ಬಾಣಲೆಯಲ್ಲಿ ಹಾಕಿ ಯಮುನಾ ನದಿಯಲ್ಲಿ ತೇಲಿ ಬಿಟ್ಟಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಸ್ಥಳೀಯರು ಈ ಮಾಹಿತಿಯನ್ನ ಪೊಲೀಸರಿಗೆ ತಿಳಿಸಿದ ಮೇಲೆ ಮಗುವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಥುರಾ ಪೊಲೀಸರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಮಗುವನ್ನು ಸರ್ಕಾರಿ ಆಸ್ಪತ್ರೆಯ ಮಕ್ಕಳ ವಿಭಾಗಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಮನೋಜ್ ಶರ್ಮಾ ಅವರು ಕಬ್ಬಿಣದ ಬಾಣಲೆಯಲ್ಲಿದ್ದ ಮಗುವನ್ನು ಹೊರಗೆ ತೆಗೆದುಕೊಂಡು ಆಸ್ಪತ್ರೆಗೆ ಕರೆದೊಯ್ದರು. ಆ ಮಗುವನ್ನು ಬಿಳಿ ಬಿಟ್ಟೆಯಿಂದ ಕಟ್ಟಿ ಬಾಣಲೆಯಲ್ಲಿ ಹಾಕಲಾಗಿತ್ತು. ಮಗು ಅಳುತ್ತಿದ್ದನ್ನು ನೋಡಿದ ಸ್ಥಳೀಯರು ನಮಗೆ ಮಾಹಿತಿ ನೀಡಿದರು. ಅದೃಷ್ಟವಶಾತ್ ಬಾಣಲೆಯು ಮಗುಚಿಕೊಂಡಿಲ್ಲ. ಹಾಗೇನಾದರೂ ಆಗಿದ್ದರೆ ಮಗುವು ನೀರಿನಲ್ಲಿ ಮುಳುಗುತ್ತಿತ್ತು ಎಂದಿದ್ದಾರೆ. ಸದ್ಯ ಆ ಮಗುವಿನ ಪೋಷಕರ ಪತ್ತೆಗಾಗಿ ಕಾರ್ಯಾಚರಣೆ ಮಾಡಲಾಗಿದೆ. ಆ ಮಗುವನ್ನು ಯಾರೂ ದತ್ತು ಪಡೆಯಲು ಮುಂದೆ ಬರದಿದ್ದರೆ, ಜಿಲ್ಲಾಡಳಿತದ ಅನುಮತಿ ಮೇರೆಗೆ ನಾನೇ ಸಾಕುತ್ತೇನೆ ಎಂದು ಹಿಂದೂಸ್ತಾನಿ ಬಿರಾದಾರಿ ಉಪಾಧ್ಯಕ್ಷ ವಿಶಾಲ್ ಶರ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ