2018 ರಲ್ಲಿ ಮಹಾರಾಷ್ಟ್ರದ ಚರಂಡಿಯಲ್ಲಿ ಸಿಕ್ಕಿದ ಮಗುವನ್ನು ದತ್ತು ಪಡೆದ ಇಟಲಿ ದಂಪತಿ
Team Udayavani, Feb 20, 2023, 4:27 PM IST
ಮಹಾರಾಷ್ಟ್ರ: 2018 ರಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಹಾಸ್ನಗರದಲ್ಲಿ ಚರಂಡಿಯಲ್ಲಿ ಸಿಕ್ಕಿದ್ದ ನವಜಾತ ಶಿಶುವನ್ನು ಇಟಲಿಯದಂಪತಿಗಳು ದತ್ತು ಪಡೆಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
2018 ರಲ್ಲಿ ಮಹಾರಾಷ್ಟ್ರದ ಥಾಣೆಯ ಉಲ್ಹಾಸ್ನಗರದಲ್ಲಿರುವ ಚರಂಡಿಯಲ್ಲಿ ನವಜಾತ ಶಿಶುವೊಂದು ಇಲ್ಲಿನ ಚರಂಡಿಯಲ್ಲಿರುವುದನ್ನು ವಡೋಲ್ ಗ್ರಾಮದ ಶಿವಾಜಿ ರಾಗಾಡೆ ಮತ್ತು ಅವರ ಪತ್ನಿ ಜಯಶ್ರೀ ಪತ್ತೆ ಮಾಡಿ ಥಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮಗುವನ್ನು ಪರೀಕ್ಷಿಸಿದ ವೇಳೆ ಮಗುವಿನ ತಲೆಯಲ್ಲಿ ಗಾಯಗಳಾಗಿ ಅನಾರೋಗ್ಯದಿಂದ ಬಳಲುತ್ತಿತ್ತು ಕೂಡಲೇ ಮಗುವನ್ನು ಮುಂಬೈನ ವಾಡಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲದೆ ಮಗುವಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನೂ ಹಂಚಲಾಗಿತ್ತು, ಆದರೆ ಮಗುವಿನ ಪೋಷಕರು ಪತ್ತೆಯಾಗಿರಲಿಲ್ಲ ಅಲ್ಲದೆ ಆಸ್ಪತ್ರೆಯಲ್ಲಿದ್ದ ಮಗುವಿನ ಆರೈಕೆಗೆ ಹೆಚ್ಚಿನ ಹಣದ ಅವಶ್ಯಕತೆ ಇದ್ದುದರಿಂದ ದಾನಿಗಳಿಂದ ನೆರವನ್ನು ಯಾಚಿಸಿದ್ದರು ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು ಕೇವಲ 24 ಗಂಟೆಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹವಾಗಿತ್ತು.
ಮಗುವಿನ ಪೋಷಕರ ಪತ್ತೆಗೆ ಸಾಕಷ್ಟು ಪ್ರಯತ್ನ ಪಟ್ಟರೂ ಪ್ರಯೋಜನವಾಗಲಿಲ್ಲ ಕೆಲವು ಸಮಯಗಳ ಬಳಿಕ ಇಟಲಿಯ ದಂಪತಿಗಳು ಮಗುವನ್ನು ದತ್ತು ಪಡೆದುಕೊಳ್ಳಲು ಮುಂದಾಗಿದ್ದಾರೆ ಈ ವೇಳೆ ಇಟಲಿಯ ದಂಪತಿಗಳಿಗೆ ಕಾನೂನಿನ ಸಮಸ್ಯೆ ಎದುರಾದ ಪರಿಣಾಮ ಮಗುವನ್ನು ಆಶ್ರಮದಲ್ಲಿ ಆರೈಕೆ ಮಾಡಲಾಗಿತ್ತು ಆದರೆ ಇದೀಗ ಇಟಲಿ ದಂಪತಿ ಕಾನೂನು ತೊಡಕುಗಳನ್ನು ಪೂರ್ಣಗೊಳಿಸಿ ಕಳೆದ ಶುಕ್ರವಾರ ಮಗುವನ್ನು ದತ್ತು ಪಡೆದು ಸಂತೋಷದಿಂದ ಇಟಲಿಗೆ ತೆರಳಿದ್ದಾರೆ. ಅವರ ಮುಂದಿನ ಜೀವನ ಒಳ್ಳೆಯದಾಗಲಿ ಎಂದು ನಾವು ಹಾರೈಸೋಣ…
ಇದನ್ನೂ ಓದಿ: ಪೃಥ್ವಿ ಶಾಗೆ ಕಿರಿಕ್: ಸಪ್ನಾ ಗಿಲ್ ಸೇರಿ ನಾಲ್ವರಿಗೆ 14 ದಿನಗಳ ನ್ಯಾಯಾಂಗ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್