ಫೇಸ್ಬುಕ್ ಪ್ರಿಯಕರನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ನವವಿವಾಹಿತೆ!
Team Udayavani, May 9, 2018, 11:52 AM IST
ವಿಜಯವಾಡ: ಆಂಧ್ರದಲ್ಲಿ ನಡೆದ ಅತ್ಯಂತ ಕಳವಳಕಾರಿ ಘಟನೆಯೊಂದರಲ್ಲಿ ನವವಿವಾಹಿತೆಯೊಬ್ಬಳು ಪ್ರಿಯಕರನೊಂದಿಗೆ ಸಂಚು ಹೂಡಿ ಪತಿಯನ್ನೇ ಬರ್ಬರವಾಗಿ ಹತ್ಯೆಗೈದಿದ್ದಾಳೆ.
ವಾಜಿಯಾನಗರಂನಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಕೃತ್ಯಕ್ಕೆ ಸಂಬಂಧಿಸಿ ಮಹಿಳೆ ಮತ್ತು ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸರಸ್ವತಿ ಎಂಬ ಯುವತಿ ಪದವಿ ವ್ಯಾಸಂಗ ಮಾಡುತ್ತಿದ್ದ ವೇಳೆ ಶಿವ ಎಂಬ ಯುವಕನೊಂದಿಗೆ ಫೇಸ್ಬುಕ್ನಲ್ಲಿ ಪರಿಚಿತಳಾಗಿದ್ದು, ಆ ಬಳಿಕ ಅದು ಗಾಢ ಪ್ರೇಮಕ್ಕೆ ತಿರುಗಿದೆ.
ಈ ನಡುವೆ ಸರಸ್ವತಿಗೆ ಹತ್ತಿರದ ಸಂಬಂಧಿಯಾಗಿರುವ ಶಂಕರ್ ರಾವ್ ಎನ್ನುವ ಇಂಜಿನಿಯರ್ರೊಂದಿಗೆ ವಿವಾಹವಾಗಿದೆ. ಮದುವೆ ಸರಸ್ವತಿ ಇಷ್ಟಕ್ಕೆ ವಿರುದ್ಧವಾಗಿ ಒತ್ತಾಯಪೂರ್ವಕವಾಗಿ ನಡೆದಿದೆಯೋ ಎನ್ನುವುದು ತಿಳಿದು ಬಂದಿಲ್ಲ.
ಮದುವೆಯಾದ ಬಳಿಕವೂ ಶಿವನೊಂದಿಗೆ ಸಂಪರ್ಕದಲ್ಲಿದ್ದ ಸರಸ್ವತಿ ಪತಿಯನ್ನು ಕೊಲೆಗೈಯಲು ಸಂಚು ರೂಪಿಸಿ ಅದಕ್ಕೆ ಸ್ಥಳ ಮತ್ತು ಸಮಯವನ್ನೂ ನಿಗದಿ ಮಾಡಿದ್ದಾಳೆ.
ಮದುವೆಯಾಗಿ 10 ದಿನಗಳಲ್ಲಿ ಬೈಕ್ನಲ್ಲಿ ಪತಿಯೊಂದಿಗೆ ಶಾಪಿಂಗ್ಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ನಿರ್ಜನ ಪ್ರದೇಶದಲ್ಲಿ ಮೂತ್ರ ವಿಸರ್ಜನೆಗೆಂದು ಬೈಕ್ ನಿಲ್ಲಿಸುವಂತೆ ಹೇಳಿ ದ್ದಾಳೆ. ಸ್ಥಳದಲ್ಲಿದ್ದ ಪೊದೆಗಳ ಮರೆಯಲ್ಲಿ ಅಡಗಿದ್ದಾಳೆ. ಈ ವೇಳೆ ಆಟೋರಿಕ್ಷಾದಲ್ಲಿ ಬಂದ ದುಷ್ಕರ್ಮಿಗಳು ಕಬ್ಬಿಣದ ರಾಡ್ನಿಂದ ಶಂಕರ್ರಾವ್ ಅವರನ್ನು ಇರಿದು ಬರ್ಬರವಾಗಿ ಹತ್ಯೆಗೈದಿದ್ದಾರೆ.
ನಾಟಕ ಆಡಿದ ಸರಸ್ವತಿ ತನ್ನ ಆಭರಣಗಳನ್ನು ಕಳಚಿಟ್ಟು,ಯಾರೋ ದುಷ್ಕರ್ಮಿಗಳು ನನ್ನ ಪತಿಯನ್ನು ಹತ್ಯೆಗೈದು ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಬೊಬ್ಬಿಟ್ಟಿದ್ದಾಳೆ.
ಪೊಲೀಸರು ಪ್ರಕರಣದಲ್ಲಿ ಅನುಮಾನಗೊಂಡು ತೀವ್ರ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ