ಸೈಕಲ್ ತುಳಿಯುತ್ತಲೇ ಒಡಿಶಾ ಸುತ್ತಿದ್ದ ಸಾರಂಗಿ
Team Udayavani, May 31, 2019, 6:00 AM IST
ಒಡಿಶಾದ ಬಾಲಸೋರ್ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ತನ್ನ ಸರಳ ಜೀವನ ಶೈಲಿಯಿಂದಲೇ ಮನೆಮಾತಾದ ಪ್ರತಾಪ್ ಚಂದ್ರ ಸಾರಂಗಿ ಸಹಾಯಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಒಡಿಶಾದಲ್ಲಿ ಇವರು ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆಗೆ ಹೆಸರಾದವರು. ಪ್ರಖರ ವಾಗ್ಮಿ, ಸಂಸ್ಕೃತ ಪಂಡಿತ ಹಾಗೂ ಆರ್ಎಸ್ಎಸ್ ಕಾರ್ಯಕರ್ತ ಸಾರಂಗಿ ಸೈಕಲ್ನಲ್ಲೇ ಹಳ್ಳಿಗಳಿಗೆ ಸುತ್ತುವ ಸರಳ ಜೀವಿ. ಇವರ ಎದುರು ಬಾಲಸೋರ್ನಲ್ಲಿ ಬಿಜೆಡಿಯಿಂದ ಮಾಧ್ಯಮ ದೊರೆ, ಕೋಟ್ಯಧಿಪತಿ ಎಂದೇ ಕರೆಯಲ್ಪಟ್ಟ ರವೀಂದ್ರ ಕುಮಾರ್ ಜೇನಾ ವಿರುದ್ಧ 12 ಸಾವಿರ ಮತಗಳಿಂದ ಜೇನಾರನ್ನು ಸೋಲಿಸಿದ್ದಾರೆ. ಕಾಂಗ್ರೆಸ್ನಿಂದ ನಬಜ್ಯೋತಿ ಪಟ್ನಾಯಕ್ ಕೂಡ ಕಣಕ್ಕೆ ಇಳಿದಿದ್ದರು.
ಬಾಲಸೋರ್ನಲ್ಲಿ ಪ್ರಧಾನಿ ಮೋದಿ ಕೂಡ ಪ್ರಚಾರ ನಡೆಸಿದ್ದರು. ಅಂದಹಾಗೆ ಇದಕ್ಕೂ ಮೊದಲು ಎರಡು ಬಾರಿ ನೀಲಗಿರಿ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಿ ಶಾಸಕರಾಗಿದ್ದರು. 2014ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರಾದರೂ, 1.42 ಲಕ್ಷ ಮತಗಳಿಂದ ಜೇನಾ ವಿರುದ್ಧ ಸೋತಿದ್ದರು. ಜೇನಾ ಐಷಾರಾಮಿ ಕಾರುಗಳಲ್ಲಿ ಸುತ್ತಾಡಿ ಮತಯಾಚನೆ ಮಾಡುತ್ತಿದ್ದರೆ, ಇತ್ತ ಸಾರಂಗಿ ಬಾಡಿಗೆಗೆ ಪಡೆದ ರಿಕ್ಷಾದಲ್ಲಿ ಸುತ್ತುತ್ತಾ ಮತ ಯಾಚಿಸುತ್ತಿದ್ದರು. ಇವರನ್ನು ಇಲ್ಲಿನ ಜನರು ನಾನಾ ಎಂದೇ ಕರೆಯುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್