ಕೈಗಾ ಅಣು ವಿದ್ಯುತ್‌ ಸ್ಥಾವರ ವಿಸ್ತರಣೆಗೆ ತಡೆ; ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ

ಯೋಜನೆ ವಿಸ್ತರಣೆಯಿಂದ ಪರಿಸರಕ್ಕೆ ಅಪಾಯ: ಅರ್ಜಿದಾರರ ವಾದ

Team Udayavani, Oct 13, 2022, 7:30 AM IST

ಕೈಗಾ ಅಣು ವಿದ್ಯುತ್‌ ಸ್ಥಾವರ ವಿಸ್ತರಣೆಗೆ ತಡೆ; ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ

ನವದೆಹಲಿ: ಕೈಗಾ ಅಣು ವಿದ್ಯುತ್‌ ಸ್ಥಾವರದ ವಿಸ್ತರಣೆಗೆ ನ್ಯೂಕ್ಲಿಯರ್‌ ಪವರ್‌ ಕಾರ್ಪೋರೇಷನ್‌ ಆಫ್ ಇಂಡಿಯಾ ಲಿ.(ಎನ್‌ಪಿಸಿಐಎಲ್‌)ಗೆ ನೀಡಲಾಗಿದ್ದ ಅನುಮತಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ತಡೆ ಹಿಡಿದಿದೆ.

ಕೈಗಾದ ಘಟಕ 5 ಮತ್ತು 6ನ್ನು ವಿಸ್ತರಣೆ ಮಾಡಲು ನೀಡಿರುವಂತಹ ಜಾಗವು ಪಶ್ಚಿಮ ಘಟ್ಟದ ಸೂಕ್ಷ್ಮ ವಲಯದಲ್ಲಿ ಬರುತ್ತದೆ. ಈ ವಿಸ್ತರಣೆಯಿಂದಾಗಿ ಅಲ್ಲಿನ ಜೀವವೈವಿಧ್ಯತೆಗೆ ತೊಂದರೆಯಾಗಲಿದೆ ಎಂದು ಕೈಗಾ ಅಣು ವಿದ್ಯುತ್‌ ಸ್ಥಾವರ ಮತ್ತು ಘಟಕ ವಿರೋಧಿ ಹೋರಾಟ ಸಮಿತಿಯು ಎನ್‌ಜಿಟಿಗೆ ಅರ್ಜಿ ಸಲ್ಲಿಸಿತ್ತು. ಆ ಅರ್ಜಿ ವಿಚಾರಣೆ ಮಾಡಿರುವ ನ್ಯಾಯಮೂರ್ತಿ ಕೆ.ರಾಮಕೃಷ್ಣನ್‌ ಮತ್ತು ಸತ್ಯಗೋಪಾಲ್‌ ಕೊರ್ಲಪಾರ್ಟಿ ಅವರನ್ನೊಳಗೊಂಡ ಎನ್‌ಜಿಟಿ ಪೀಠವು ಅನುಮತಿಯನ್ನು ತಡೆಹಿಡಿದಿದೆ.

ಎನ್‌ಪಿಸಿಐಎಲ್‌ ಮತ್ತೆ ಅನುಮತಿ ಸಿಗುವವರೆಗೆ ಯಾವುದೇ ರೀತಿಯಲ್ಲಿ ವಿಸ್ತರಣೆಯ ಕಾರ್ಯಾರಂಭ ಮಾಡುವಂತಿಲ್ಲ. ಹಾಗಿದ್ದರೂ, ಪರಿಸರ ಮತ್ತು ಅರಣ್ಯ ಸಚಿವಾಲಯ ಹೊರಡಿಸುವ ನಿರ್ದೇಶನಗಳಿಗೆ ಒಳಪಟ್ಟು ನಿರ್ಮಾಣ ಕಾರ್ಯವನ್ನು ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೈಗಾದ 5 ಮತ್ತು 6ನೇ ಘಟಕ ಪಶ್ಚಿಮ ಘಟ್ಟದ ಸೂಕ್ಷ್ಮ ವಲಯದಲ್ಲಿ ಬರುತ್ತದೆಯೇ ಎನ್ನುವುದನ್ನು ಪರಿಶೀಲನೆ ಮಾಡಬೇಕು. ಹಾಗೆಯೇ ಈ ಯೋಜನೆಯಿಂದ ಕೈಗಾ ಗ್ರಾಮದ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರಲಿದೆ ಎನ್ನುವುದನ್ನೂ ಪರಿಶೀಲನೆ ಮಾಡಿ ಎಂದು ಪರಿಸರ ಮತ್ತು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ.

ಈ ಸಮಸ್ಯೆಯನ್ನು ಬಗೆಹರಿಸಲು ತೆಗೆದುಕೊಳ್ಳಬಹುದಾದಂತಹ ಕ್ರಮ, ಅಲ್ಲಿನ ನೀರಿನ ಲಭ್ಯತೆ, ಸೂಕ್ಷ್ಮ ವಲಯದ ಮೇಲೆ ಯೋಜನೆಯಿಂದಾಗಬಹುದಾದ ಪರಿಣಾಮ, ಅಲ್ಲಿನ ನೀರಿನ ಮೂಲಗಳ ಮೇಲಾಗಬಹುದಾದ ಪರಿಣಾಮ, ಘಟಕಗಳಲ್ಲಿ ಅಣು ವಿಕಿರಣದಿಂದಾಗಿ ಸ್ಥಳೀಯ ಜನರ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮದ ಮೇಲೆ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ಎನ್‌ಪಿಸಿಐಎಲ್‌ಗೆ ಸೂಚಿಸಲಾಗಿದೆ.

ಕೈಗಾ ಅಣು ಸ್ಥಾವರದ ಘಟಕ 5 ಮತ್ತು 6 ಅನ್ನು 235 ಮೆಗಾವ್ಯಾಟ್‌ನಿಂದ 700ಮೆಗಾವ್ಯಾಟ್‌ಗೆ ವಿಸ್ತರಿಸಲು 2019ರಲ್ಲಿ ಅನುಮತಿ ನೀಡಲಾಗಿತ್ತು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.