![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
ಬಟ್ಟೆ ಬಿಚ್ಚುವ ಶಿಕ್ಷೆ: 88 ವಿದ್ಯಾರ್ಥಿನಿಯರಿಗೆ ಪರಿಹಾರ, NHRC ಆದೇಶ
Team Udayavani, Jul 3, 2018, 4:55 PM IST
![school-girls-600.jpg](https://www.udayavani.com/wp-content/uploads/2018/07/3/school-girls-600-620x349.jpg)
ಹೊಸದಿಲ್ಲಿ : ಕಳೆದ ವರ್ಷ ಶಿಕ್ಷಕರಿಂದ ಶಾಲೆಯಲ್ಲಿ ಶಿಕ್ಷೆಯ ರೂಪದಲ್ಲಿ ಬಲವಂತವಾಗಿ ಬಟ್ಟೆ ಬಿಚ್ಚುವ ಅಮಾನವೀಯ ಶಿಕ್ಷೆಗೆ ಗುರಿಯಾಗಿದ್ದ 88 ಶಾಲಾ ಬಾಲಕಿಯರಿಗೆ ತಲಾ 5,000 ರೂ. ನಗದು ಪರಿಹಾರ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಅರುಣಾಚಲ ಪ್ರದೇಶ ಸರಕಾರಕ್ಕೆ ಆದೇಶಿಸಿದೆ.
ಕಳೆದ ವರ್ಷ ನವೆಂಬರ್ 23ರಂದು ಪಾಪಂ ಪಾರೆ ಜಿಲ್ಲೆಯ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದ 6 ಮತ್ತು 7ನೇ ತರಗತಿಯ 88 ವಿದ್ಯಾರ್ಥಿನಿಯರು ತಮ್ಮ ಶಾಲೆಯ ಮುಖ್ಯೋಪಾಧ್ಯಾಯರ ನಿಂದಿಸುವ ಅಶ್ಲೀಲ ಪದಗಳನ್ನು ಕಾಗದದ ತುಂಡೊಂದರಲ್ಲಿ ಬರೆದಿದ್ದರು ಎನ್ನಲಾಗಿತ್ತು. ಆದರೆ ವಿದ್ಯಾರ್ಥಿನಿಯರು ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದರು. ಹಾಗಿದ್ದರೂ ಈ “ಅಪರಾಧ’ಕ್ಕಾಗಿ ಆ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಬಲವಂತದಿಂದ “ಬಟ್ಟೆ ಬಿಚ್ಚುವ’ ಅಮಾನವೀಯ ಶಿಕ್ಷೆಯನ್ನು ನೀಡಲಾಗಿತ್ತು.
ಈ ಘಟನೆ ಕುರಿತ ವರದಿಯನ್ನು ಸ್ವಪ್ರೇರಣೆಯಿಂದ ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಅರುಣಾಚಲ ಪ್ರದೇಶ ಸರಕಾರಕ್ಕೆ ಮತ್ತು ಕೇಂದ್ರ ಮಾನವ ಅಭಿವೃದ್ಧಿ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿತ್ತು.
ತರಗತಿಯಲ್ಲಿ ಬಟ್ಟೆ ಬಿಚ್ಚುವ ಅಮಾನವೀಯ ಶಿಕ್ಷೆಗೆ ಗುರಿಯಾಗಿದ್ದ 88 ವಿದ್ಯಾರ್ಥಿನಿಯರಿಗೆ ತಲಾ 5,000 ರೂ. ಪರಿಹಾರ ಪಾವತಿಸಿರುವ ಸಾಕ್ಷ್ಯವನ್ನು ಮತ್ತು ಬದ್ದತೆ ಕಾಯ್ದ ವರದಿಯನ್ನು ನಾಲ್ಕು ವಾರಗಳಿಗೆ ತನಗೆ ಸಲ್ಲಿಸತಕ್ಕದ್ದು ಎಂದು ಎನ್ಎಚ್ಆರ್ಸಿ ಅರುಣಾಚಲ ಪ್ರದೇಶ ಸರಕಾರಕ್ಕೆ ಆದೇಶಿಸಿದೆ.
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.