ಮಾನವ ಹಕ್ಕುಗಳ ಆಯೋಗದ ಪಾತ್ರ ಹಿರಿದು: ಪ್ರಧಾನಿ ಮೋದಿ
Team Udayavani, Oct 13, 2018, 10:17 AM IST
ಹೊಸದಿಲ್ಲಿ: ಸರಕಾರದ ಅಭಿವೃದ್ಧಿ ಗುರಿಗಳು ಸಮರ್ಪಕವಾಗಿ ಸಾಕಾರಗೊಳ್ಳುವಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್ಎಚ್ಆರ್ಸಿ) ಪಾತ್ರ ಹಿರಿದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿ ಶುಕ್ರವಾರ ನಡೆದ ಆಯೋಗದ 25ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಸಮಸ್ತ ನಾಗರಿಕರಿಗೆ ಅವರ ಹಕ್ಕುಗಳ ಉಪಯೋಗ ಸಿಗುವಂತೆ ಮಾಡುವಲ್ಲಿ ಸರಕಾರ ಕಟಿಬದ್ಧವಾಗಿದೆ. ಇತ್ತೀಚೆಗೆ ತ್ರಿವಳಿ ತಲಾಖ್ ಬಗ್ಗೆ ರೂಪಿಸಿರುವ ಕಾನೂನು ಇದಕ್ಕೆ ಸೂಕ್ತ ಉದಾಹರಣೆ ಎಂದರು. ಸದ್ಯದಲ್ಲೇ ಈ ಕಾನೂನಿಗೆ ರಾಜ್ಯಸಭೆಯ ಒಪ್ಪಿಗೆ ಸಿಗುವ ಆಶಯವಿದೆ ಎಂದು ಅವರು ತಿಳಿಸಿದರು. ಇದೇ ವೇಳೆ, ಆಯುಷ್ಮಾನ್ ಭಾರತ ವಿಮಾ ಯೋಜನೆಯು ಜಾರಿಗೆ ಬಂದ ಎರಡೂವರೆ ವಾರಗಳಲ್ಲಿ ಸುಮಾರು 50 ಸಾವಿರ ಜನರು ಈ ಯೋಜನೆಯ ಉಪಯೋಗ ಪಡೆದಿದ್ದಾರೆಂದು ಪ್ರಧಾನಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?