ಐಸಿಸ್ ನಂಟು: ತ.ನಾಡಿನಲ್ಲಿ ಎನ್ಐಎ ಶೋಧ
Team Udayavani, Nov 30, 2019, 8:42 PM IST
ಚೆನ್ನೈ: ಐಸಿಸ್ ಉಗ್ರ ಸಂಘಟನೆಯ ಜತೆ ನಂಟು ಆರೋಪ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ತಮಿಳುನಾಡಿನ ತಂಜಾವೂರು ಹಾಗೂ ತಿರುಚಿರಾಪಳ್ಳಿಯಲ್ಲಿ ಶೋಧನೆ ನಡೆಸಿ, ದಾಖಲೆಗಳನ್ನು ವಶಕ್ಕೆ ಪಡೆದಿದೆ.
ಕಳೆದ ಜೂನ್ನಲ್ಲಿ ಐಸಿಸ್ ಜತೆ ಸಂಪರ್ಕ ಅಪಾದನೆ ಮೇರೆಗೆ ಕೊಯಮತ್ತೂರಿನಲ್ಲಿ ಮೊಹಮ್ಮದ್ ಅಜರುದ್ದೀನ್ ಹಾಗೂ ಶೇಖ್ ಹಿದಾಯತುಲ್ಲಾನನ್ನು ಬಂಧಿಸಲಾಗಿತ್ತು. ತನಿಖೆ ಮುಂದುವರಿಸಿದ ಎನ್ಐಎ, ತಂಜಾವೂರಿನ ಅಲಾವುದ್ದೀನ್ ಹಾಗೂ ತಿರುಚಿರಾಪಳ್ಳಿಯ ಎಸ್.ಸಫುìದ್ದೀನ್ ಮನೆಯಲ್ಲಿ ಶೋಧ ನಡೆಸಿ, 2 ಲ್ಯಾಪ್ಟಾಪ್, 6 ಮೊಬೈಲ್, 11 ಸಿಮ್ಕಾರ್ಡ್, ಪೆನ್ಡ್ರೈವ್, ಹಾರ್ಡ್ಡಿಸ್ಕ್, ಮೆಮೋರಿ ಕಾರ್ಡ್, ಸಿಡಿ, ಡಿವಿಡಿ, ಡಿಜಿಟಲ್ ಡಿವೈಸ್ ಮತ್ತಿತರ ದಾಖಲೆಗಳನ್ನು ವಶಕ್ಕೆ ಪಡೆದಿದೆ. ಈ ವಸ್ತುಗಳನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಹಾಗೂ ವಿಧಿ ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೇ ತಿಂಗಳಿನಲ್ಲಿ ಕೊಯಮತ್ತೂರಿನ ಆರು ಮಂದಿ ವಿರುದ್ಧ ಎಫ್ಐಆರ್ ದಾಖಸಲಾಗಿತ್ತು. ಇವರು ಐಸಿಸ್ ಉಗ್ರ ಸಂಘಟನೆಗೆ ಯುವಕರನ್ನು ನೇಮಿಸಿಕೊಂಡು, ಕೇರಳ ಹಾಗೂ ತಮಿಳುನಾಡಿನಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಚಿಂತನೆ ಹೊಂದಿದ್ದರು ಎಂದು ಎನ್ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು