ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು
Team Udayavani, Sep 19, 2020, 9:38 AM IST
ಹೊಸದಿಲ್ಲಿ: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ದಾಳಿ ನಡೆಸಿದ್ದು, ಒಂಬತ್ತು ಅಲ್ ಖೈದಾ ಉಗ್ರರನ್ನು ಬಂಧಿಸಲಾಗಿದೆ.
ಎನ್ ಐಎ ಅಧಿಕಾರಿಗಳು ಇಂದು ಬೆಳಿಗ್ಗೆ ಏಕಕಾಲದಲ್ಲಿ ಕೇರಳದ ಎರ್ನಾಕುಲಂ ಮತ್ತು ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಲ್ಲಿ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ದಿಲ್ಲಿ ಪ್ರವಾಸ ಯಶಸ್ವಿ, ಸಂಪುಟ ವಿಸ್ತರಣೆ ಬಗ್ಗೆ ಇಂದೇ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ
ಮುರ್ಶಿದಾಬಾದ್ ನಲ್ಲಿ ಆರು ಜನ ಅಲ್ ಖೈದಾ ಉಗ್ರರನ್ನು ಬಂಧಿಸಿದ್ದರೆ, ಮೂವರು ಉಗ್ರರನ್ನು ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದೆ.
ಬಂಧಿತರೆಲ್ಲರೂ 20 ವರ್ಷದ ಆಸುಪಾಸಿನವರಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೇರಳದ ಎರ್ನಾಕುಲಂ ನಲ್ಲಿ ಬಂಧಿಸಿದವರನ್ನು ಮುರ್ಶಿದ್ ಹಸನ್, ಇಯಾಕುಬ್ ಬಿಸ್ವಾಸ್ ಮತ್ತು ಮೊಸರಫ್ ಹೊಸೈನ್ ಎಂದು ಗುರುತಿಸಲಾಗಿದೆ.
ನಜಮುಸ್ ಸಕಿಬ್, ಅಬು ಸುಫಿಯಾನ್, ಮೈನೂಲ್ ಮೊಂಡಾಲ್, ಲೂ ಯಾನ್ ಅಹಮದ್, ಅಲ್ ಮಮುನ್ ಕಮಲ್ ಮತ್ತು ಅತಿತುರ್ ರೆಹಮಾನ್ ಎಂಬ ಆರು ಜನರು ಪ.ಬಂಗಾಳದಲ್ಲಿ ಬಂದಿಸಲಾಗಿದೆ. ಇವರುಗಳು ಮುರ್ಶಿದಾಬಾದ್ ನಿವಾಸಿಗಳು ಎನ್ನಲಾಗಿದೆ.
ಈ ಬಂಧಿತ ವ್ಯಕ್ತಿಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನ ಮೂಲದ ಅಲ್-ಖೈದಾ ಭಯೋತ್ಪಾದಕರು ಒಟ್ಟುಗೂಡಿಸಿದ್ದಾರೆ. ಇವರುಗಳನ್ನು ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಲು ಪ್ರೇರೇಪಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿದೆ.
9 Al-Qaeda operatives arrested by NIA, in raids conducted at multiple locations in Murshidabad, West Bengal and Ernakulam, Kerala https://t.co/iSjTGukEbw
— ANI (@ANI) September 19, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?