ಪಿಎಫ್ಐ ಫಂಡಿಂಗ್ ಗೆ ಎನ್ಐಎ ಬ್ರೇಕ್: 5ನೇ ಆರೋಪಪಟ್ಟಿಯಲ್ಲಿ ಉಲ್ಲೇಖ
ನಿಷೇಧಿತ ಸಂಘಟನೆಯ 77 ಬ್ಯಾಂಕ್ ಖಾತೆಗಳ ಸ್ತಂಭನ
Team Udayavani, Mar 19, 2023, 7:00 AM IST
ನವದೆಹಲಿ:ಭಾರತವನ್ನು ಅಸ್ಥಿರಗೊಳಿಸಲು ಕ್ರಿಮಿನಲ್ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) 5ನೇ ಆರೋಪಪಟ್ಟಿ ಸಲ್ಲಿಸಿದೆ.
ನಿಷೇಧಿತ ಸಂಘಟನೆಯ ಹಣಕಾಸು ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳಲ್ಲಿದ್ದ ಪಿಎಫ್ಐನ 37 ಬ್ಯಾಂಕ್ ಖಾತೆಗಳು ಹಾಗೂ ಅದರ 19 ನಾಯಕರಿಗೆ ಸೇರಿರುವ 40 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ಎನ್ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.
ದೇಶ ವಿಭಜನೆ ಸಂಚು:
ಪಿಎಫ್ಐನ 12 ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಒಟ್ಟು 19 ಮಂದಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಕೋಮು ಲೆಕ್ಕಾಚಾರದಲ್ಲಿ ದೇಶವನ್ನು ಇಬ್ಭಾಗಿಸುವುದೇ ಪಿಎಫ್ಐ ಉದ್ದೇಶವಾಗಿತ್ತು ಎಂದು ಎನ್ಐಎ ತಿಳಿಸಿದೆ. ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಆಡಳಿತ ಮಾದರಿಯನ್ನು ಕಿತ್ತುಹಾಕಿ, ಶರಿಯಾ ಕಾನೂನಿನೊಂದಿಗೆ ಇಸ್ಲಾಮಿಕ್ ಕ್ಯಾಲಿಫೇಟ್ ಸ್ಥಾಪಿಸುವುದೇ ಇವರ ಕಟ್ಟಕಡೆಯ ಗುರಿಯಾಗಿತ್ತು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ವೇತನ ರೂಪದಲ್ಲಿ ಹಣ:
ನಿಷೇಧಿತ ಸಂಘಟನೆಯು ದೇಶಾದ್ಯಂತ ಇರುವ ತನ್ನ ಉಗ್ರ ಸದಸ್ಯರಿಗೆ ಮತ್ತು ಶಸ್ತ್ರಾಸ್ತ್ರ ತರಬೇತಿ ನೀಡುವವರಿಗೆ “ವೇತನದ ರೂಪ’ದಲ್ಲಿ ಹಣಕಾಸು ಸಂದಾಯ ಮಾಡುತ್ತಿತ್ತು. ಪಿಎಫ್ಐ ಸದಸ್ಯತ್ವ ಪಡೆದವರಿಗೆ ಗೌಪ್ಯ ಮತ್ತು ವಿಧೇಯತೆಯ ಪ್ರಮಾಣ ಮಾಡಿಸಿಕೊಂಡು, ಅವರನ್ನು ಭಾರತ ಸರ್ಕಾರದ ವಿರುದ್ಧ ಸಶಸ್ತ್ರ ಹೋರಾಟಕ್ಕೆ ಅಣಿಗೊಳಿಸುವ ವ್ಯವಸ್ಥಿತ ಕಾರ್ಯತಂತ್ರವನ್ನು ಸಂಘಟನೆ ರೂಪಿಸಿತ್ತು. ಅತ್ಯುತ್ತಮ ತರಬೇತಿ ಪಡೆದ ಪಿಎಫ್ಐ ಆರ್ಮಿ ರೂಪಿಸುವ ಉದ್ದೇಶದಿಂದ ದೇಶದಾದ್ಯಂತ ಅತಿ ಹೆಚ್ಚು ಪ್ರಭಾವಕ್ಕೊಳಗಾದ ಯುವಕರಿಗೆ ಶಸ್ತ್ರಾಸ್ತ್ರಗಳ ಬಳಕೆ ಬಗ್ಗೆ ತರಬೇತಿ ನೀಡಲಾಗುತ್ತಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದೂ ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿದೆ.
ಬ್ಯಾಂಕ್ ಖಾತೆ ಸ್ತಂಭನ:
ಬೆಂಗಳೂರು, ಚೆನ್ನೈ, ಕಲ್ಲಿಕೋಟೆ, ಹೈದರಾಬಾದ್ ಸೇರಿದಂತೆ 10 ರಾಜ್ಯಗಳಲ್ಲಿ ಪಿಎಫ್ಐ ಹೊಂದಿದ್ದ 37 ಬ್ಯಾಂಕ್ ಖಾತೆಗಳು ಮತ್ತು ಅದರ 19 ಸದಸ್ಯರು ಹೊಂದಿದ್ದ 40 ಬ್ಯಾಂಕ್ ಖಾತೆಗಳನ್ನು ಸ್ತಂಭನಗೊಳಿಸಲಾಗಿದೆ. ಈ ಮೂಲಕ ಪಿಎಫ್ಐನ ಹಣಕಾಸು ವಹಿವಾಟಿಗೆ ಮೂಗುದಾರ ಹಾಕಲಾಗಿದೆ ಎಂದೂ ಎನ್ಐಎ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್