NIA ಭಾರೀ ಕಾರ್ಯಾಚರಣೆ; ISIS”ಬಳ್ಳಾರಿ ಮಾಡ್ಯೂಲ್‌”ಯೋಜನೆ ವಿಫಲ:8 ಏಜೆಂಟ್‌ಗಳು ಅರೆಸ್ಟ್

ಬೆಂಗಳೂರು, ಬಳ್ಳಾರಿ ಸೇರಿ 4 ರಾಜ್ಯಗಳಾದ್ಯಂತ ಏಕಕಾಲದಲ್ಲಿ ದಾಳಿ...

Team Udayavani, Dec 18, 2023, 6:24 PM IST

NIA (2)

ಹೊಸದಿಲ್ಲಿ: ಐಸಿಸ್ ವಿರುದ್ಧ ಸೋಮವಾರ (ಡಿ.18) ಬೆಳಗ್ಗೆ ಕಾರ್ಯಾಚರಣೆಗಿಳಿದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೋಮವಾರ ನಾಲ್ಕು ರಾಜ್ಯಗಳ 19 ಸ್ಥಳಗಳಲ್ಲಿ ದಾಳಿ ನಡೆಸಿ ನಿಷೇಧಿತ ಉಗ್ರ ಸಂಘಟನೆಯ ಬಳ್ಳಾರಿ ಘಟಕದ ಎಂಟು ಏಜೆಂಟ್‌ಗಳನ್ನು ಬಂಧಿಸಿದೆ. ಉಗ್ರ ತಂಡದ ನಾಯಕ ಮಿನಾಜ್ ಸೇರಿ ಇತರ ಆರೋಪಿಗಳ ಭಯೋತ್ಪಾದಕ ಕೃತ್ಯಗಳನ್ನೆಸಗುವ, ವಿಶೇಷವಾಗಿ IED ಸ್ಫೋಟಗಳನ್ನು ನಡೆಸುವ ಯೋಜನೆಗಳನ್ನು ವಿಫಲಗೊಳಿಸಿದೆ.

ಬಂಧಿತರು ಕರ್ನಾಟಕದ ಬಳ್ಳಾರಿಯ ಮಿನಾಜ್ ಅಲಿಯಾಸ್ ಮೊಹಮದ್ ಸುಲೇಮಾನ್, ಸೈಯದ್ ಸಮೀರ್ , ಬೆಂಗಳೂರಿನ ಮೊಹಮದ್ ಮುಜಮ್ಮಿಲ್, ದೆಹಲಿಯ ಶಯಾನ್ ರಹಮಾನ್, ಮುಂಬೈನಿಂದ ಅನಾಸ್ ಇಕ್ಬಾಲ್ ಶೇಖ್, ಮೊಹಮ್ಮದ್ ಮುನಿರುದ್ದೀನ್, ಸೈಯದ್ ಸಮೀವುಲ್ಲಾ ಅಲಿಯಾಸ್ ಸಮಿ, ಜಮ್ಶೆಡ್‌ಪುರದ ಎಂಡಿ ಶಹಬಾಜ್ ಅಲಿಯಾಸ್ ಜುಲ್ಫಿಕರ್(ಗುಡ್ಡು) ಎಂಬವರನ್ನು ಬಂಧಿಸಲಾಗಿದೆ.

NIA ತಂಡಗಳು ಬಳ್ಳಾರಿ, ಬೆಂಗಳೂರು, ಮಹಾರಾಷ್ಟ್ರದ ಅಮರಾವತಿ, ಮುಂಬೈ ಮತ್ತು ಪುಣೆ, ಜಾರ್ಖಂಡ್‌ನ ಜಮ್ಶೆಡ್‌ಪುರ ಮತ್ತು ಬೊಕಾರೊ, ದೆಹಲಿಯಾದ್ಯಂತ ಹರಡಿಕೊಂಡಿದ್ದ 19 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದವು.

ಎಂಟು ಐಸಿಸ್ ಏಜೆಂಟ್‌ಗಳು ಉಗ್ರ ಸಂಬಂಧಿತ ಕೃತ್ಯಗಳು ಮತ್ತು ನಿಷೇಧಿತ ಸಂಘಟನೆಯಾದ ಐಸಿಸ್‌ನ ಚಟುವಟಿಕೆಗಳನ್ನು ಸಕ್ರಿಯವಾಗಿ ಉತ್ತೇಜಿಸುವಲ್ಲಿ ಮಿನಾಜ್ ನೇತೃತ್ವದಲ್ಲಿ ತೊಡಗಿಸಿಕೊಂಡಿದ್ದರು.

ದಾಳಿ ವೇಳೆ ಸ್ಫೋಟಕ ಕಚ್ಚಾ ಸಾಮಗ್ರಿಗಳಾದ ಸಲ್ಫರ್, ಪೊಟ್ಯಾಸಿಯಮ್ ನೈಟ್ರೇಟ್, ಇದ್ದಿಲು, ಗನ್ ಪೌಡರ್, ಎಥೆನಾಲ್, ಹರಿತವಾದ ಆಯುಧಗಳು, ಲೆಕ್ಕವಿಲ್ಲದ ನಗದು ಮತ್ತು ದೋಷಾರೋಪಣೆಯ ದಾಖಲೆಗಳು, ಸ್ಮಾರ್ಟ್‌ಫೋನ್‌ಗಳು ಮತ್ತು ಇತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರಂಭಿಕ ತನಿಖೆಯ ಪ್ರಕಾರ, ಆರೋಪಿಗಳು ಸ್ಫೋಟಕ ಕಚ್ಚಾ ವಸ್ತುಗಳನ್ನು ಐಇಡಿ ತಯಾರಿಸಿ ಅದನ್ನು ಸ್ಫೋಟ ನಡೆಸಲು ಸಂಚು ಹೂಡಿದ್ದರು. ಹಿಂಸಾತ್ಮಕ ಜಿಹಾದ್, ಖಿಲಾಫತ್, ಐಸಿಸ್ ಇತ್ಯಾದಿಗಳ ಮಾರ್ಗವನ್ನು ಅನುಸರಿಸಿ ಎನ್‌ಕ್ರಿಪ್ಟ್ ಮಾಡಿದ ಅಪ್ಲಿಕೇಶನ್‌ಗಳ ಮೂಲಕ ನಿರಂತರವಾಗಿ ಪರಸ್ಪರ ಸಂಪರ್ಕದಲ್ಲಿದ್ದರು ಎಂದು ತನಿಖೆಯಿಂದ ಬಹಿರಂಗವಾಗಿವೆ. ನಿರ್ದಿಷ್ಟವಾಗಿ ನೇಮಕಾತಿ ಉದ್ದೇಶಗಳಿಗಾಗಿ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಹಾದ್ ಉದ್ದೇಶಕ್ಕಾಗಿ ಮುಜಾಹಿದೀನ್‌ಗಳ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಪ್ರಸಾರ ಮಾಡುತ್ತಿದ್ದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.