Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
ಕೇಂದ್ರ ಸರಕಾರಕ್ಕೆ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಪತ್ರ; ಖಲಿಸ್ಥಾನಿ ಗುಂಪಿನಿಂದ ಆಪ್ ಹಣ ಪಡೆದಿರುವ ಆರೋಪ
Team Udayavani, May 7, 2024, 6:55 AM IST
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆ ನಡೆಸಬೇಕು ಎಂದು ಕೋರಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದಾರೆ.
“ಸಿಕ್ಖ್ ಫಾರ್ ಜಸ್ಟೀಸ್’ ಉಗ್ರ ಸಂಘಟನೆಯಿಂದ ಕೇಜ್ರಿವಾಲ್ ಹಣಕಾಸು ನೆರವು ಪಡೆದಿದ್ದಾರೆ ಎಂದು ಸಕ್ಸೇನಾ ಆರೋಪಿಸಿದ್ದಾರೆ.
ಈ ಕುರಿತಾಗಿ ಕೇಂದ್ರ ಸರಕಾರಕ್ಕೆ ವಿವರಣಾತ್ಮಕ ಪತ್ರ ಬರೆದಿರುವ ಸಕ್ಸೇನಾ, ಸಿಕ್ಖ್ ಫಾರ್ ಜಸ್ಟೀಸ್ ಸಂಘಟನೆಯಿಂದ ಆಪ್ 130 ಕೋಟಿ ರೂ. ಹಣ ಪಡೆದುಕೊಂಡಿದೆ. ಉಗ್ರ ದೇವೇಂದ್ರ ಭುಲ್ಲರ್ ಬಿಡುಗಡೆಗಾಗಿ ಈ ಹಣವನ್ನು ಪಡೆದುಕೊಳ್ಳಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಖಲಿಸ್ಥಾನಿ ಗುಂಪುಗಳಿಂದ ದೇಣಿಗೆಯಾಗಿ ಆಮ್ ಆದ್ಮಿ ಪಕ್ಷವು 130 ಕೋಟಿ ರೂ. ಪಡೆದಿತ್ತು ಎಂದು ಉಗ್ರ ಪನ್ನು ಹೇಳಿದ್ದಾನೆ ಎನ್ನಲಾದ ವೀಡಿಯೋ ಒಂದು ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈ ವೀಡಿಯೋವನ್ನೂ ಪತ್ರದ ಜತೆಗೆ ಲಗತ್ತಿಸಿರುವುದಾಗಿ ಸಕ್ಸೇನಾ ತಿಳಿಸಿದ್ದಾರೆ.
ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿಯಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಸಕ್ಸೇನಾ ಬಿಜೆಪಿ ಏಜೆಂಟ್
ರಾಜ್ಯಪಾಲ ಸಕ್ಸೇನಾ ಆರೋಪದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಆಪ್ ನಾಯಕರು ಸಕ್ಸೇನಾ ಅವರನ್ನು ಬಿಜೆಪಿಯ ಏಜೆಂಟ್ ಎಂದು ಕರೆದಿದ್ದಾರೆ. ಇದು ಕೇಜ್ರಿವಾಲ್ ವಿರುದ್ಧ ಕೇಂದ್ರ ಸರಕಾರ ಕೈಗೊಂಡಿರುವ ಪಿತೂರಿ. ಬಿಜೆಪಿಯ ಭಾಗವಾಗಿ ರಾಜ್ಯಪಾಲರು ಈ ಪಿತೂರಿ ಭಾಗವಾಗಿದ್ದಾರೆ ಎಂದು ಆಪ್ ನಾಯಕ ಸೌರಭ್ ಭಾರಧ್ವಾಜ್ ಆರೋಪಿಸಿದ್ದಾರೆ. ಅರವಿಂದ ಕೇಜ್ರಿವಾಲ್ ದಿಲ್ಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಜೈಲು ಪಾಲಾಗಿದ್ದು, ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ಎದುರಿಸುತ್ತಿದ್ದಾರೆ.
ಯಾರೀ ಭುಲ್ಲರ್?
1993ರ ದಿಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದ ಮಾಜಿ ಪ್ರೊಫೆಸರ್. 2001ರಲ್ಲಿ ದೇವೇಂದ್ರ ಭುಲ್ಲರ್ಗೆ ಮರಣದಂಡನೆ ನೀಡಿ ಕೋರ್ಟ್ ತೀರ್ಪು ನೀಡಿತ್ತು. ಅನಂತರ ಅದನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ