ತಮಿಳುನಾಡಿನಲ್ಲಿ ಎಲ್ಟಿಟಿಇ ಬೆಂಬಲಿಗರ ವಿರುದ್ದ ಎನ್ಐಎ ಶೋಧ
ವಾಣಿಜ್ಯ ಸಂಸ್ಥೆಗಳು ಮತ್ತು ಪ್ರಮುಖ ನಾಯಕರು ಗುರಿ
Team Udayavani, Oct 9, 2022, 6:49 PM IST
ಚೆನ್ನೈ : ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ(ಎಲ್ಟಿಟಿಇ )ಬೆಂಬಲಿಗರು ರಾಜ್ಯದ ವಾಣಿಜ್ಯ ಸಂಸ್ಥೆಗಳು ಮತ್ತು ಪ್ರಮುಖ ನಾಯಕರ ಮೇಲೆ ದಾಳಿ ನಡೆಸಲು ಯೋಜಿಸಿರುವ ಪ್ರಕರಣದಲ್ಲಿ ಎನ್ಐಎ ತಮಿಳುನಾಡಿನ ಎರಡು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಶನಿವಾರ ಸೇಲಂ ಮತ್ತು ಶಿವಗಂಗ ಜಿಲ್ಲೆಗಳಲ್ಲಿ ಶೋಧ ನಡೆಸಲಾಗಿದ್ದು, ಶ್ರೀಲಂಕಾ ಮೂಲದ ನಿಷೇಧಿತ ಭಯೋತ್ಪಾದಕ ಗುಂಪು ಎಲ್ಟಿಟಿಇಗೆ ಸಂಬಂಧಿಸಿದ ಕಾಂಪ್ಯಾಕ್ಟ್ ಡಿಸ್ಕ್ಗಳಂತಹ ಡಿಜಿಟಲ್ ಸಾಧನಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಎಲ್ಟಿಟಿಇ ಕುರಿತ ಪುಸ್ತಕಗಳು, ಹತ್ಯೆಗೀಡಾದ ಮುಖ್ಯಸ್ಥ ಪ್ರಭಾಕರನ್ ಸೇರಿದಂತೆ ನಾಯಕರ ಫೋಟೋಗಳು, ದೋಷಾರೋಪಣೆಯ ದಾಖಲೆಗಳು, ಇನ್ವಾಯ್ಸ್ಗಳು, ಅಕ್ರಮ ಬಂದೂಕುಗಳ ತಯಾರಿಕೆಗೆ ಬಳಸಿದ ವಸ್ತುಗಳ ಬಿಲ್ಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳ ತಯಾರಿಕೆಗೆ ಬಳಸುವ ಬಿಲ್ಗಳುಮತ್ತು ಜಂಗಲ್ ಸರ್ವೈವಲ್ ಕಿಟ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಮಿಳುನಾಡಿನ ಓಮಲೂರು ಪೊಲೀಸ್ ಠಾಣೆಯಲ್ಲಿ ಮೇ 19 ರಂದು ಇಬ್ಬರು ವ್ಯಕ್ತಿಗಳ ವಿರುದ್ಧ ಆರಂಭದಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 25 ರಂದು ಎನ್ಐಎ ಮರು ನೋಂದಾಯಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ತಮಿಳುನಾಡಿನ ವಾಣಿಜ್ಯ ಸಂಸ್ಥೆಗಳು ಮತ್ತು ಪ್ರಮುಖ ನಾಯಕರನ್ನು ಗುರಿಯಾಗಿಸುವ ಉದ್ದೇಶದಿಂದ ಇಬ್ಬರು ಅಕ್ರಮ ಬಂದೂಕುಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳ ತಯಾರಿಕೆಯಲ್ಲಿ ತೊಡಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ