ದೇವರನಾಡನ್ನೇ ಕಂಗೆಡಿಸಿದ ನಿಫಾ ವೈರಸ್‌ ಜ್ವರ


Team Udayavani, May 22, 2018, 6:00 AM IST

28.jpg

ಕಲ್ಲಿಕೋಟೆ: ಕೇರಳದ ಕಲ್ಲಿಕೋಟೆಯಲ್ಲಿ ನಿಫಾ ವೈರಸ್‌ ಸೋಂಕು ಹರಡಿರುವುದರಿಂದ ಇಡೀ ರಾಜ್ಯದ ಜನರು ಆತಂಕಗೊಂಡಿದ್ದಾರೆ. ನೂರಾರು ಜನರು ಸಮೀಪದ ಗ್ರಾಮಗಳಿಂದ ಆಸ್ಪತ್ರೆಗೆ ಆಗಮಿಸು ತ್ತಿದ್ದು, ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ರೋಗದ ಭೀತಿ ವ್ಯಕ್ತಪಡಿಸುತ್ತಿದ್ದಾರೆ. ಈ ವರೆಗೆ ಒಟ್ಟು 9 ಜನರು ಈ ರೋಗದಿಂದ ಸಾವನ್ನಪ್ಪಿದ್ದು, 12 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 20 ಜನರನ್ನು ಪರಿವೀಕ್ಷಣೆಯಲ್ಲಿಡಲಾಗಿದೆ.

ಚೆರುವನೂರು ಮತ್ತು ಪೆರಂಬ್ರಾ ಗ್ರಾಮದ 30 ಕುಟುಂಬಗಳು ಮತ್ತು 150 ಜನರನ್ನು ಸ್ಥಳಾಂತರಿಸಲಾಗಿದೆ. ಬಾಧಿತ ಪ್ರದೇಶಗಳ ಜನರು 2 ವಾರಗಳವರೆಗೆ ಎಲ್ಲಿಗೂ ಪ್ರಯಾಣಿಸ ದಂತೆ, ಯಾರನ್ನೂ ಸಂಪರ್ಕಿಸದಂತೆ ಸೂಚಿಸಲಾಗಿದೆ. ರೋಗ ಹರಡುವ ಭೀತಿಯಿಂದಾಗಿ ಮೃತರ ಅಂತ್ಯ ಸಂಸ್ಕಾರಕ್ಕೆ ಕುಟುಂಬದವರಿಗೂ ಅವಕಾಶ ನೀಡಲಾಗುತ್ತಿಲ್ಲ.

ವೈರಸ್‌ಗಳು ಬಾವಲಿಗಳಿಂದಲೂ ಹರಡುತ್ತಿದ್ದು, ಅಧಿಕಾರಿಗಳು ಬಾವಲಿಗಳನ್ನು ಸೆರೆಹಿಡಿದು ಸಾಯಿಸುತ್ತಿದ್ದಾರೆ. ಗ್ರಾಮಗಳಲ್ಲಿ ಕೆಲವು ದಿನಗಳ ಹಿಂದೆ ಒಂದಷ್ಟು ಬಾವಲಿಗಳು ಹಾಗೂ ಹಕ್ಕಿಗಳು ಸಾವನ್ನಪ್ಪಿದ್ದು ಕಂಡುಬಂದಿತ್ತು. ಆದರೆ ಗ್ರಾಮಸ್ಥರು ನಿರ್ಲಕ್ಷಿಸಿದ್ದರು. ಆಸ್ಪತ್ರೆಯಲ್ಲಿ ಮೊದಲು ದಾಖಲಾದ ನಿಫಾ ಸೋಂಕಿನ ವ್ಯಕ್ತಿಗೆ ಚಿಕಿತ್ಸೆ ನೀಡಿದ ನರ್ಸ್‌ ಕೂಡ ವೈರಸ್‌ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯ ಬಳಿಕ ವೈದ್ಯಕೀಯ ಸಿಬಂದಿಗೂ ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕಳೆದ ಎರಡು ದಿನಗಳಿಂದಲೂ ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಆಸ್ಪತ್ರೆಯಲ್ಲಿದ್ದು, ಮೇಲುಸ್ತುವಾರಿ ವಹಿಸಿದ್ದಾರೆ.

ಮೊದಲು ಕಂಡು ಬಂದಿದ್ದು ಮಲೇಷ್ಯಾದಲ್ಲಿ
ಈ ರೋಗ ಮೊದಲು ಕಂಡುಬಂದಿದ್ದು 1998-99ರಲ್ಲಿ ಮಲೇಷ್ಯಾ, ಸಿಂಗಾಪುರದಲ್ಲಿ. ಮಲೇಷ್ಯಾದ ನಿಫಾ ಎಂಬ ಹಳ್ಳಿಯಲ್ಲಿ ಮೊದಲು ಕಂಡಿದ್ದರಿಂದ ಈ ರೋಗಕ್ಕೆ ಈ ಹೆಸರಿಡಲಾಗಿದೆ. ಇಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 265 ಜನರಿಗೆ ರೋಗ ತಗುಲಿತ್ತು. ಹಂದಿಗಳಿಂದ ಈ ರೋಗ ಹರಡಿದ್ದು, 100ಕ್ಕೂ ಹೆಚ್ಚು ಹಂದಿಗಳಲ್ಲಿ ರೋಗ ಕಾಣಿಸಿಕೊಂಡಿತ್ತು.

ವಿಶಿಷ್ಟ  ಪ್ರಭೇದದ ವೈರಸ್‌
ಪ್ಯಾರಾಮಿಕೊವಿರಿಡೆ ಪ್ರಭೇದದ ವೈರಸ್‌
ಈ ಹಿಂದೆ ಭಾರತದಲ್ಲಿ 2-3 ಬಾರಿ ಕಾಣಿಸಿಕೊಂಡಿದ್ದ‌ ನಿಫಾ ವೈರಸ್‌
2001ರಲ್ಲಿ ಮೊದಲು ಬಾಂಗ್ಲಾದಲ್ಲಿ, ಅನಂತರ ಭಾರತದ ಸಿಲಿಗುರಿಯಲ್ಲಿ ವೈರಸ್‌ ಪತ್ತೆ

ಸ್ಥಳಕ್ಕೆ ಮಣಿಪಾಲ ವೈದ್ಯರು
ಉಡುಪಿ: ನಿಫಾ ಜ್ವರ ಕಂಡು ಬಂದಿರುವ ಕೇರಳದ ಕಲ್ಲಿಕೋಟೆಗೆ ಮಣಿಪಾಲದ ವೈದ್ಯರು ಧಾವಿಸಿದ್ದಾರೆ. ಮಣಿಪಾಲದ ವೈರಲ್‌ ಇನ್‌ಸ್ಟಿಟ್ಯೂಟ್‌ ಮುಖ್ಯಸ್ಥ ಡಾ| ಅರುಣ್‌ ಕುಮಾರ್‌ ಅವರು ತೆರಳಿದ್ದು ಅಲ್ಲಿನ ಜನರಿಗೆ ಮಾರ್ಗ ದರ್ಶನ ನೀಡುತ್ತಿದ್ದಾರೆ. ಮಣಿಪಾಲದ ಆಸ್ಪತ್ರೆಗೆ ಪರೀಕ್ಷೆಗಾಗಿ ಜ್ವರಪೀಡಿತರ ರಕ್ತದ ಮಾದರಿಗಳನ್ನು ಕಳುಹಿಸಲಾಗಿದೆ. 

ಗುಣ-ಲಕ್ಷಣಗಳೇನು?
ದೇಹಕ್ಕೆ ಪ್ರವೇಶಿಸಿದ 7-14 ದಿನಗಳಲ್ಲಿ ನಿಶ್ಚಲವಾಗಿರುವ ವೈರಸ್‌, ಅನಂತರ ವೇಗವಾಗಿ ಹರಡುತ್ತದೆ. ಮಿದುಳು ಊತ, ಹಠಾತ್‌ ಜ್ವರ, ಉಸಿರು ಕಡಿಮೆ ಯಾಗುವುದು, ರಕ್ತದೊತ್ತಡ ಕಡಿಮೆಯಾಗುವುದು, ತಲೆನೋವು, ಮಿದುಳಿನ ಉರಿಯೂತ, ಅಮಲು, ಶ್ವಾಸಕೋಶ ಸೋಂಕು, ಮಾನಸಿಕ ಗೊಂದಲ ಮುಂತಾದ ಗುಣಲಕ್ಷಣ ಕಾಣಿಸಿಕೊಳ್ಳುತ್ತದೆ. ರೋಗಿಯನ್ನು ವೆಂಟಿಲೇಟರ್‌ನಲ್ಲಿ ಇಡುವುದು ಅಗತ್ಯವಾಗುತ್ತದೆ. 24ರಿಂದ 48 ತಾಸುಗಳಲ್ಲಿ ರೋಗಿ ಕೋಮಾಗೂ ಹೋಗಬಹುದು.

ಸಾಂಕ್ರಾಮಿಕ ರೋಗ
ಗಾಳಿಯಿಂದ ಅಥವಾ ಜೊಲ್ಲಿನಿಂದ ರೋಗ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ಗಾಳಿಯಿಂದ ಹರಡುವ ಬಗ್ಗೆ ಸಾಬೀತಾಗಿಲ್ಲದಿದ್ದರೂ ಹಂದಿ, ಬಾವಲಿ ಅಥವಾ ಹಕ್ಕಿಗಳ ಮೂಲಕ ಇದು ಹರಡುವುದು ಖಚಿತಗೊಂಡಿದೆ. ಮುಖ್ಯವಾಗಿ ಬಾವಲಿಗಳು ಕಚ್ಚಿದ ಹಣ್ಣನ್ನು ಸೇವಿಸ ಲೇಬಾರದು ಎಂದು ಆರೋಗ್ಯ ಇಲಾಖೆ ಖಡಾಖಂಡಿತವಾಗಿ ತಿಳಿಸಿದೆ.

ಕೇರಳದಲ್ಲಿನ ಸನ್ನಿವೇಶವನ್ನು ನಾವು ಗಮನಿಸುತ್ತಿ ದ್ದೇವೆ. ಕೇರಳ ಸರಕಾರದೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಕೇಂದ್ರದಿಂದ ಎಲ್ಲ ರೀತಿಯ ನೆರವಿನ ಭರವಸೆ ನೀಡಲಾಗಿದ್ದು ಕೇಂದ್ರದ ವೈದ್ಯಕೀಯ ತಂಡವನ್ನು ಕೂಡ ಕಳುಹಿಸಲಾಗಿದೆ.
– ಜೆ.ಪಿ.ನಡ್ಡಾ, ಕೇಂದ್ರ ಆರೋಗ್ಯ ಸಚಿವ

ಟಾಪ್ ನ್ಯೂಸ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.