Ladakh ಭೀಕರ ಅವಘಡ ; ವಾಹನ ನದಿಗೆ ಉರುಳಿ 9 ಯೋಧರ ಮೃತ್ಯು
Team Udayavani, Aug 19, 2023, 9:20 PM IST
PTI/REPRESENTATIVE
ಲಡಾಖ್ : ಸೇನಾ ವಾಹನವು ಆಳವಾದ ನದಿಗೆ ಉರುಳಿ ಕನಿಷ್ಠ ಒಂಬತ್ತು ಭಾರತೀಯ ಸೇನಾ ಯೋಧರು ಪ್ರಾಣ ಕಳೆದುಕೊಂಡಿದ್ದು, ಒಬ್ಬರು ಗಾಯಗೊಂಡ ದುರಂತ ಘಟನೆ ಶನಿವಾರ ಲಡಾಖ್ನಲ್ಲಿ ಸಂಭವಿಸಿದೆ.
ಅಧಿಕಾರಿಗಳ ಪ್ರಕಾರ, ಘಟನೆಯು ಕ್ಯಾರಿ ಪಟ್ಟಣದಿಂದ ಕನಿಷ್ಠ ಏಳು ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ. ಮೃತರಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ (JCOs) ಕೂಡ ಸೇರಿದ್ದಾರೆ.
“ಯೋಧರು ಕರು ಗ್ಯಾರಿಸನ್ನಿಂದ ಲೇಹ್ ಬಳಿಯ ಕ್ಯಾರಿಗೆ ತೆರಳುತ್ತಿದ್ದರು. ಟ್ರಕ್ನಲ್ಲಿ 10 ಯೋಧರು ಪ್ರಯಾಣಿಸುತ್ತಿದ್ದರು ಮತ್ತು ಬೆಂಗಾವಲು ಪಡೆಯಲ್ಲಿ ಐದು ವಾಹನಗಳಿದ್ದವು ಎಂದು ಲಡಾಖ್ನ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಗಳನ್ನು ಕಳೆದುಕೊಂಡಿರುವುದು ದುಃಖವಾಗಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡ ಸಿಬಂದಿಯನ್ನು ಫೀಲ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ