ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದವನಿಂದಲೇ ಮತ್ತೆ ಬಾಲಕಿಯ ರೇಪ್
ಇಂಧೋರ್ ನಲ್ಲಿ ಹೇಯ ಘಟನೆ ; ಬಾಲಕಿಯ ಸ್ಥಿತಿ ಚಿಂತಾಜನಕ
Team Udayavani, Nov 13, 2022, 2:51 PM IST
ಇಂದೋರ್: 9 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಹಲ್ಲೆಯಿಂದ ಗಾಯಗೊಂಡಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಇಂದೋರ್ನ ಉಪ ಪೊಲೀಸ್ ಆಯುಕ್ತ ಅಮಿತ್ ತೋಲಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಾಲಕಿಯನ್ನು ಕಟ್ಟಡ ನಿರ್ಮಾಣ ಸ್ಥಳದಿಂದ ಅಪಹರಿಸಿ ಅತ್ಯಾಚಾರವೆಸಗಲಾಗಿದೆ. ಆಕೆ ಕಾವಲುಗಾರನ ಮಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯು ತನ್ನ ಪೋಷಕರೊಂದಿಗೆ ಸಣ್ಣ ಗುಡಿಸಲಿನಲ್ಲಿ ಮಲಗಿದ್ದಾಗ 32 ವರ್ಷದ ಆರೋಪಿ ಅವಳನ್ನು ಅಪಹರಿಸಿ ನಿರ್ಮಾಣ ಸ್ಥಳದ ಇನ್ನೊಂದು ಬದಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಹಲ್ಲೆಯಿಂದ ಸಂತ್ರಸ್ತೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವವಾಗಿದೆ ಎಂದು ಅವರು ಹೇಳಿದರು.
ಬಾಲಕಿಯ ಅಳಲು ಕೇಳಿದ ಆಕೆಯ ಪೋಷಕರು ಆಕೆಯ ರಕ್ಷಣೆಗೆ ಮುಂದಾದರು. ಆಕೆಯನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿ ಇಂದೋರ್ ಜಿಲ್ಲೆಯ ಅಹಿರ್ಖೇಡಿ ಗ್ರಾಮದ ನಿವಾಸಿಯಾಗಿದ್ದಾನೆ. ಶನಿವಾರ ಸಂಜೆ ಆತನನ್ನು ಬಂಧಿಸಲಾಗಿದ್ದು, ತಾನು ಅಪರಾಧ ಎಸಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಆರೋಪಿ ಈ ಹಿಂದೆಯೂ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಆರೋಪಿ ಮಾನಸಿಕ ಅಸ್ಥಿರ ಮತ್ತು ಮಾದಕ ವ್ಯಸನಿ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ