ನಿಫಾ ಸೋಂಕು ಪ್ರಕರಣ: ಬಾಲಕನ ನಂಟು ಹೊಂದಿದ್ದ ನಾಲ್ವರು ಸೇಫ್
ನಿಫಾದಿಂದಾಗಿ ಇತ್ತೀಚೆಗೆ ಮೃತನಾಗಿದ್ದ ಬಾಲಕ; ಸಂಪರ್ಕಿತರ ಎರಡನೇ ಟೆಸ್ಟ್ನಲ್ಲೂ ನಕಾರಾತ್ಮಕ ಫಲಿತಾಂಶ
Team Udayavani, Sep 12, 2021, 11:15 PM IST
ತಿರುವನಂತಪುರ: “ನಿಫಾ ಸೋಂಕಿನಿಂದಾಗಿ ಇತ್ತೀಚೆಗೆ ಮೃತಪಟ್ಟಿದ್ದ 12 ವರ್ಷದ ಬಾಲಕನ ಜೊತೆಗೆ ಪ್ರಾಥಮಿಕ ಹಂತದ ನಂಟು ಹೊಂದಿದ್ದ ನಾಲ್ವರು ಸೋಂಕಿಗೆ ಒಳಗಾಗಿಲ್ಲ. ಅವರಿಂದ ಪಡೆಯಲಾದ ಸ್ಯಾಂಪಲ್ಗಳು ನೆಗೆಟಿವ್ ಫಲಿತಾಂಶ ನೀಡಿವೆ” ಎಂದು ಕೇರಳದ ಆರೋಗ್ಯ ಸಚಿವರಾದ ವೀಣಾ ಜಾರ್ಜ್ ತಿಳಿಸಿದ್ದಾರೆ.
“ಈ ನಾಲ್ವರನ್ನು ಈ ಹಿಂದೆಯೂ ಪರೀಕ್ಷೆಗೊಳಪಡಿಸಲಾಗಿತ್ತು. ಆಗಲೂ ಅವರ ಸ್ಯಾಂಪಲ್ಗಳು ನೆಗೆಟಿವ್ ಫಲಿತಾಂಶ ಕೊಟ್ಟಿದ್ದವು. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ ಮತ್ತೊಮ್ಮೆ ಪರೀಕ್ಷೆಗೊಳಪಡಿಸಲಾಗಿದ್ದು, ಈ ಬಾರಿಯೂ ಅವರ ಸ್ಯಾಂಪಲ್ಗಳು ನೆಗೆಟಿವ್ ಫಲಿತಾಂಶ ನೀಡಿವೆ” ಎಂದು ಅವರು ತಿಳಿಸಿದ್ದಾರೆ.
“ಬಾಲಕನಿದ್ದ ಪ್ರದೇಶದಲ್ಲೂ ವ್ಯಾಪಕವಾಗಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದ ಅವರು, ಸೋಂಕಿನ ಮೂಲ ಸ್ಥಳವನ್ನು ಪತ್ತೆ ಹಚ್ಚುವುದು ಮುಖ್ಯವಾಗುತ್ತದೆ. ಹಾಗಾಗಿ, ಪುಣೆಯಿಂದ ಬಂದಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯ ತಜ್ಞರ ತಂಡ, ಬಾಲಕನಿದ್ದ ಪ್ರದೇಶದಲ್ಲಿ ಇರುವ ಎಲ್ಲಾ ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸುತ್ತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶದಲ್ಲಿ 2400ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ
“ಇನ್ನು, ಹೈ ರಿಸ್ಕ್ ಹಂತದಲ್ಲಿರುವ ಕೆಲವು ಸೋಂಕಿತರನ್ನು ಕಲ್ಲಿಕೋಟೆ ವೈದ್ಯಕೀಯ ಆಸ್ಪತ್ರೆಯಲ್ಲೇ ಐಸೋಲೇಟ್ ಮಾಡಲಾಗಿದೆ. ಅವರೆಲ್ಲರ ಆರೋಗ್ಯ ಸ್ಥಿರವಾಗಿದೆ” ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ