ನಿಪ ಆರ್ಭಟಕ್ಕೆ ಕೇರಳ ಜನತೆ ತತ್ತರ


Team Udayavani, May 24, 2018, 6:00 AM IST

x-31.jpg

ತಿರುವನಂತಪುರ: ಕೇರಳಕ್ಕೆ ವಕ್ಕರಿಸಿರುವ ನಿಪ ವೈರಸ್‌ ಈವರೆಗೆ 10 ಮಂದಿಯನ್ನು ಬಲಿತೆಗೆದುಕೊಂಡ ಹಿನ್ನೆಲೆಯಲ್ಲಿ ಇಲ್ಲಿನ ನಾಲ್ಕು ಜಿಲ್ಲೆಗಳಿಂದ ದೂರ ಉಳಿಯುವಂತೆ ಪ್ರವಾಸಿಗರಿಗೆ ಸರ್ಕಾರ ಸಲಹೆ ನೀಡಿದೆ. ಕಲ್ಲಿಕೋಟೆ, ಮಲಪ್ಪುರಂ, ವಯನಾಡ್‌, ಕಣ್ಣೂರಿಗೆ ತೆರಳದಂತೆ ಆರೋಗ್ಯ ಕಾರ್ಯದರ್ಶಿ ರಾಜೀವ್‌ ಸದಾನಂದನ್‌ ಸೂಚಿಸಿದ್ದಾರೆ. ಆದಷ್ಟು ಕೇರಳದ ಯಾವುದೇ ಭಾಗಕ್ಕೂ ಸದ್ಯಕ್ಕೆ ಭೇಟಿ ನೀಡದಿರುವುದು ಒಳಿತು ಎಂದೂ ಹೇಳಿದ್ದಾರೆ. ಇದೇ ವೇಳೆ ಸದ್ಯದ ಪರಿಸ್ಥಿತಿ ಬಗ್ಗೆ ವಿವರಿಸಿದ ಅವರು, “”ಎಲ್ಲೆಡೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಈಗಾಗಲೇ 2,000 ರಿಬಾವೈರಿನ್‌ ಮಾತ್ರೆ (ಆ್ಯಂಟಿವೈರಲ್‌)ಗಳನ್ನು ತರಿಸಲಾಗಿದೆ, 8 ಸಾವಿರ ಮಾತ್ರೆಗಳು ಸದ್ಯದಲ್ಲೇ ಬರಲಿವೆ” ಎಂದು ಆರೋಗ್ಯ ಸಚಿವೆ ಶೈಲಜಾ ಮಾಹಿತಿ ನೀಡಿದ್ದಾರೆ. 

ರಾಜಸ್ಥಾನದಲ್ಲೂ ಅಲರ್ಟ್‌: ನಿಪ ಭೀತಿ ಹಿನ್ನೆಲೆಯಲ್ಲಿ ರಾಜಸ್ಥಾನ ದಲ್ಲೂ ಹೈಅಲರ್ಟ್‌ ಘೋಷಿಸಲಾಗಿದೆ. ರಾಜಸ್ಥಾನದ ಅನೇಕರು ಕೇರಳದಲ್ಲಿದ್ದು, ಅವರು ಆಗಾಗ್ಗೆ ತಮ್ಮ ರಾಜ್ಯಕ್ಕೆ ಭೇಟಿ ನೀಡುತ್ತಿರುತ್ತಾರೆ. ಹೀಗಾಗಿ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. 

ಕ್ರಿಮಿನಲ್‌ ಕೇಸ್‌: ಇದೇ ವೇಳೆ, ನಿಪ ವೈರಸ್‌ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಆತಂಕ ಸೃಷ್ಟಿಸುವಂಥ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸುವುದಾಗಿ ಕೇರಳ ಪೊಲೀಸರು ಎಚ್ಚರಿಸಿದ್ದಾರೆ.

ನರ್ಸ್‌ ಪತಿಗೆ ಉದ್ಯೋಗ, ಮಕ್ಕಳಿಗೂ ನೆರವು: ಕರ್ತವ್ಯದ ವೇಳೆ ನಿಪಾಹ್‌ ವೈರಸ್‌ಗೆ ತುತ್ತಾಗಿ ಮೃತಪಟ್ಟ ನರ್ಸ್‌ ಲಿನಿ ಅವರ ಕುಟುಂಬಕ್ಕೆ ಕೇರಳ ಸರ್ಕಾರ ಪರಿಹಾರ ಘೋಷಿಸಿದೆ. ಲಿನಿ ಅವರ ಪತಿಗೆ ಸರ್ಕಾರಿ ಉದ್ಯೋಗ, ಇಬ್ಬರು ಮಕ್ಕಳ ಹೆಸರಲ್ಲೂ ತಲಾ 10 ಲಕ್ಷ ರೂ. ಠೇವಣಿ ಇಡುವುದಾಗಿ ಹೇಳಿದೆ. ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನೊಂದೆಡೆ, ಅಬುಧಾಬಿ ಮೂಲದ ಇಬ್ಬರು ಉದ್ಯಮಿಗಳು ಕೂಡಲಿನಿ ಮಕ್ಕಳಿಗೆ ನೆರವು ಘೋಷಿಸಿದ್ದಾರೆ. ಲಿನಿ ಅವರು ಮಾಡಿದ ತ್ಯಾಗಕ್ಕೆ ಏನನ್ನು ನೀಡಿದರೂ ಕಡಿಮೆಯೇ ಎಂದಿರುವ ಉದ್ಯಮಿಗಳಾದ ಸಂಥಿ ಪ್ರಮೋದ್‌ ಮತ್ತು ಜ್ಯೋತಿ ಪಲ್ಲಟ್‌, ನರ್ಸ್‌ನ ಇಬ್ಬರೂ ಮಕ್ಕಳ ಶಿಕ್ಷಣ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.