ನಿರ್ಭಯಾ ಕೇಸ್ ಅಪರಾಧಿಗಳು ಕಾನೂನನ್ನು ಖುಷಿ ಸವಾರಿಯಂತೆ ಬಳಸುತ್ತಿದ್ದಾರೆ; ಕೇಂದ್ರ
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದಿಲ್ಲಿ ಹೈಕೋರ್ಟ್ ನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
Team Udayavani, Feb 1, 2020, 7:07 PM IST
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳು ಗಲ್ಲುಶಿಕ್ಷೆಯನ್ನು ವಿಳಂಬ ಮಾಡುವ ನಿಟ್ಟಿನಲ್ಲಿ ಕಾನೂನು ಮತ್ತು ನ್ಯಾಯಾಂಗ ಪ್ರಕ್ರಿಯೆಯನ್ನು ಖುಷಿಯ ಸವಾರಿಯಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ದಿಲ್ಲಿ ಹೈಕೋರ್ಟ್ ಗೆ ತಿಳಿಸಿದೆ.
ಗಲ್ಲುಶಿಕ್ಷೆ ಜಾರಿಯಾದ ನಂತರ ಮರಣದಂಡನೆ ಪ್ರಕ್ರಿಯೆ ವಿಳಂಬಗೊಳಿಸುವ ನಿಟ್ಟಿನಲ್ಲಿ ನಾಲ್ವರು ಅಪರಾಧಿಗಳು ಕಾನೂನು ಅವಕಾಶಗಳನ್ನು ಬಳಸಿಕೊಂಡು ವಿಳಂಬ ಮಾಡಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದಿಲ್ಲಿ ಹೈಕೋರ್ಟ್ ನಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಪೈಶಾಚಿಕ ಕೃತ್ಯ ಎಸಗಿದ್ದರೂ ಕೂಡಾ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೇಶದ ತಾಳ್ಮೆಯನ್ನು ಪರೀಕ್ಷಿಸಲು ಯತ್ನಿಸುತ್ತಿದ್ದು, ಇದು ಇನ್ನಷ್ಟು ವಿಳಂಬವಾಗುತ್ತ ಹೋದರೆ ದೇಶದ ಇತಿಹಾಸದಲ್ಲಿಯೇ ಇದೊಂದು ಕಪ್ಪು ಚುಕ್ಕೆಯಾಗಲಿದೆ ಎಂದು ಮೆಹ್ತಾ ವಾದಿಸಿದರು.
ನಿರ್ಭಯಾ ಪ್ರಕರಣದಲ್ಲಿ ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಇದು ತಿರಸ್ಕೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಯ ಅರ್ಜಿ ತಿರಸ್ಕೃತಗೊಂಡ ನಂತರ ಗಲ್ಲಿಗೇರಿಸಲು 14 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ನಿಗದಿಯಂತೆ ಫೆಬ್ರುವರಿ 1ರಂದು ಬೆಳಗ್ಗೆ 6ಗಂಟೆಗೆ ನಾಲ್ವರು ಅಪರಾಧಿಗಳು ಗಲ್ಲಿಗೇರಬೇಕಾಗಿತ್ತು. ಆದರೆ ಶುಕ್ರವಾರ ವಿಚಾರಣೆ ನಡೆಸಿದ್ದ ಪಟಿಯಾಲಾ ಹೌಸ್ ಕೋರ್ಟ್ ಗಲ್ಲುಶಿಕ್ಷೆಯನ್ನು ಮುಂದೂಡಿತ್ತು. ಇದು ಅಪರಾಧಿಗಳಿಗೆ ಗಲ್ಲುಶಿಕ್ಷೆಯ ದಿನಾಂಕ ಮುಂದೂಡಿಕೆಯಾಗುತ್ತಿರುವುದು ಎರಡನೇ ಬಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ