ಕ್ಷಮಾದಾನ ಅರ್ಜಿ ಸಲ್ಲಿಕೆ
Team Udayavani, Nov 9, 2019, 1:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: 2012ರ ನಿರ್ಭಯಾ ಪ್ರಕರಣದ ದೋಷಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಕ್ಷಮಾದಾನ ಕೋರಿ ರಾಷ್ಟ್ರಪತಿ ರಾಮನಾಥ ಕೋವಿಂದ್ರಿಗೆ ಅರ್ಜಿ ಸಲ್ಲಿಸಿದ್ದಾನೆ.
ಇತರ ದೋಷಿಗಳಾದ ಮುಖೇಶ್, ಪವನ್ ಗುಪ್ತ, ಅಕ್ಷಯ್ ಕುಮಾರ್ ಸಿಂಗ್ ಇನ್ನೂ ಅರ್ಜಿ ಸಲ್ಲಿಸಿಲ್ಲ ಎಂದು ದಿಲ್ಲಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ದೋಷಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಕೇವಲ 7 ದಿನ ಕಾಲಾವಕಾಶ ವಿದೆ ಎಂದು ಅ.29ರಂದು ಸುತ್ತೋಲೆ ಹೊರಡಿಸಲಾಗಿತ್ತು.