ಒಂದೇ ಬಾರಿ ನಾಲ್ವರಿಗೆ ಗಲ್ಲು ಜಾರಿ ವ್ಯವಸ್ಥೆ
Team Udayavani, Jan 3, 2020, 1:58 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಇಡೀ ದೇಶವೇ ಎದುರು ನೋಡುತ್ತಿರುವ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಶೀಘ್ರವೇ ಜಾರಿಯಾಗಲಿದೆ ಎಂಬ ಊಹಾಪೋಹಗಳು ಎಲ್ಲೆಡೆ ಹರಿದಾಡಲಾರಂಭಿಸಿವೆ. ಈ ಅಪರಾಧಿಗಳು ಬಂಧನದಲ್ಲಿರುವ ತಿಹಾರ್ ಜೈಲಿನೊಳಗೆ ಈ ಹಿಂದೆ ಇದ್ದ ಗಲ್ಲು ಶಿಕ್ಷೆ ಜಾರಿ ವ್ಯವಸ್ಥೆಯನ್ನು ನವೀಕರಿಸಲಾಗಿದ್ದು, ಒಂದೇ ಬಾರಿಗೆ ನಾಲ್ವರಿಗೆ ಗಲ್ಲು ಶಿಕ್ಷೆ ಜಾರಿ ವ್ಯವಸ್ಥೆಗೆ ಉನ್ನತೀಕರಿಸಲಾಗಿದೆ.
ಈ ಮೂಲಕ ಇಡೀ ದೇಶದಲ್ಲೇ ನಾಲ್ವರನ್ನು ಏಕಕಾಲದಲ್ಲಿ ಗಲ್ಲಿಗೇರಿಸುವ ಸೌಲಭ್ಯ ಹೊಂದಿದ ಮೊಟ್ಟಮೊದಲ ಜೈಲಾಗಿ ತಿಹಾರ್ ಹೊರಹೊಮ್ಮಿದೆ. ಈ ಬದಲಾವಣೆ ನಿರ್ಭಯಾ ಅತ್ಯಾಚಾರಿಗಳಿಗಾಗಿಯೇ ಮಾಡಲಾಗಿದೆ ಎಂಬ ವದಂತಿಗಳು ಹರಡಿವೆ.
ಮತ್ತೊಂದೆಡೆ, ತಮ್ಮ ಕ್ಷಮಾದಾನ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ತಮಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಎಂದು ನಿರ್ಭಯಾ ಅಪರಾಧಿಗಳು ತಿಹಾರ್ ಜೈಲಿನ ಆಡಳಿತಾಧಿಕಾರಿಗಳಿಗೆ ತಿಳಿಸಿದ್ದಾರೆ. ಹೀಗಾಗಿ, ಅವರ ಗಲ್ಲು ಶಿಕ್ಷೆ ಸದ್ಯಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಆದರೂ, ನೇಣು ವ್ಯವಸ್ಥೆ ಆಧುನೀಕರಣದಿಂದ ಅಪರಾಧಿಗಳ ನೇಣು ಖಾತ್ರಿ ಎಂಬ
ನಿರೀಕ್ಷೆಗಳು ಹುಟ್ಟಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ