ಒಂದು ಜಿಲ್ಲೆ; ಒಂದು ಉತ್ಪನ್ನ ಪ್ರಚಾರ
Team Udayavani, Aug 26, 2021, 6:28 AM IST
ಮುಂಬಯಿ: ಕೇಂದ್ರ ಸರಕಾರದ “ಒಂದು ಜಿಲ್ಲೆ; ಒಂದು ಉತ್ಪನ್ನ’ ಯೋಜನೆಯನ್ನು ಜನಪ್ರಿಯ ಗೊಳಿಸಲು ಬ್ಯಾಂಕ್ಗಳು ಆಯಾ ರಾಜ್ಯ ಸರಕಾರಗಳ ಜತೆಗೆ ಚರ್ಚಿಸಬೇಕು. ಈ ಬಗ್ಗೆ ಬ್ಯಾಂಕ್ಗಳಿಗೆ ಸೂಚನೆ ನೀಡಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮುಂಬಯಿನಲ್ಲಿ ಮಾತನಾಡಿದ ಅವರು, ರಫ್ತುದಾರರಿಗೆ ಅಗತ್ಯವಾಗಿರುವ ಅಂಶಗಳು ಮತ್ತು ಕೊರತೆ ನಿವಾರಿಸುವ ನಿಟ್ಟಿನಲ್ಲಿ ರಫ್ತು ಉತ್ತೇಜನ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿಗಳ ಜತೆಗೆ ಮಾತುಕತೆ ನಡೆಸುವಂತೆಯೂ ಸೂಚಿಸಿದ್ದಾರೆ. ಸರಕಾರಿ ಸ್ವಾಮ್ಯದ ಬ್ಯಾಂಕ್ಗಳು ಹೂಡಿಕೆದಾರರ ವಿಶ್ವಾಸಗಳಿಸಿಕೊಂಡ ಬಳಿಕ 12 ಸಾವಿರ ಕೋಟಿ ರೂ. ಮೊತ್ತ ಸಂಗ್ರಹಿಸುತ್ತಿವೆ.
ರಾಹುಲ್ ಗಾಂಧಿಗೆ ಏನು ಗೊತ್ತು? :
“ಸಂಪತ್ತು ಕ್ರೋಡೀಕರಣ ಎಂದರೆ ರಾಹುಲ್ ಗಾಂಧಿಗೆ ಏನು ಗೊತ್ತು?’ ಹೀಗೆಂದು ಪ್ರಶ್ನೆ ಮಾಡಿದ್ದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್. ಕಾಂಗ್ರೆಸ್ ನೇತೃತ್ವದ ಸರಕಾರದ ಅವಧಿಯಲ್ಲಿಯೇ ದೇಶದ ಸಂಪನ್ಮೂಲ ಗಳನ್ನು ಮಾರಾಟ ಮಾಡಿ, ಲಂಚ ಪಡೆದುಕೊಳ್ಳುತ್ತಿತ್ತು. ಸರಕಾರಿ ಆಸ್ತಿಗಳ ಮೂಲಕ 6 ಲಕ್ಷ ಕೋಟಿ ರೂ.ಮೌಲ್ಯದ ಸಂಪನ್ಮೂಲ ಕ್ರೋಡೀಕರಣಕ್ಕೆ ಕೈಗೊಂಡ ನಿರ್ಧಾರಕ್ಕೆ ರಾಹುಲ್ ಗಾಂಧಿ ಟೀಕಿಸಿದ್ದಕ್ಕೆ ವಿತ್ತ ಸಚಿವರು ಈ ಪ್ರಶ್ನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು