ಆರ್ಥಿಕ ಸುಧಾರಣೆ ಮುಂದುವರಿಯಲಿದೆ: ನಿರ್ಮಲಾ ಸೀತಾರಾಮನ್
Team Udayavani, Nov 24, 2020, 6:35 AM IST
ಹೊಸದಿಲ್ಲಿ: ಭಾರತದಲ್ಲಿ ಆರ್ಥಿಕ ಸುಧಾರಣೆಗಳು ಸತತವಾಗಿ ಮುಂದುವರಿಯಲಿವೆ ಎಂದು ಕೈಗಾರಿಕೋದ್ಯಮಿಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ಭಾರತ ಕೈಗಾರಿಕಾ ಒಕ್ಕೂಟ (ಸಿಐಐ) ಏರ್ಪಡಿಸಿದ್ದ ದೇಶದ ಬಹುರಾಷ್ಟ್ರೀಯ ಕಂಪನಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಕೊರೊನಾದಂತಹ ವಿಷಮಸ್ಥಿತಿಯಲ್ಲೂ ಪ್ರಧಾನಿ ನರೇಂದ್ರ ಮೋದಿ ಸುಧಾರಣೆ ಮಾಡುವ ಅವಕಾಶವನ್ನು ಬಿಟ್ಟುಕೊಡಲಿಲ್ಲ.
ದಶಕಗಳ ಕಾಲ ಸಾಧ್ಯವಾಗದೇ ಇದ್ದ ಯೋಜನೆಗಳನ್ನೆಲ್ಲ ಅವರು ಕೈಗೆತ್ತಿಕೊಂಡಿದ್ದಾರೆ. ಕೇಂದ್ರಸರಕಾರ ವೃತ್ತಿಪರವಾಗಿ ಯೋಚಿಸುತ್ತಿದೆ. ತಾನು ಹೂಡಿರುವ ಬಂಡವಾಳ ಹಿಂತೆಗೆದುಕೊಳ್ಳುತ್ತಿದೆ. ಅಂದರೆ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿಯವರು ತಮ್ಮ ಮೊದಲ ಅವಧಿಯಲ್ಲೂ ಹಲವು ಆರ್ಥಿಕ ಸುಧಾರಣೆ ಮಾಡಿದ್ದರು. ಜಿಎಸ್ಟಿ ಜಾರಿ, ತಂತ್ರಜ್ಞಾನ ಬಳಸಿ ಹಣ ನೇರವಾಗಿ ಖಾತೆಗೆ ಹಾಕಿದ್ದು, ದಿವಾಳಿ ಮತ್ತು ಭ್ರಷ್ಟಾಚಾರ ನೀತಿಯನ್ನು (ಐಬಿಸಿ) ಸಿದ್ಧಪಡಿಸಿದ್ದೆಲ್ಲ ಈ ವ್ಯಾಪ್ತಿಗೆ ಬರುತ್ತದೆ ಎಂದು ನಿರ್ಮಲಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ