ದೇಶದ ಹಣದುಬ್ಬರ ಪರಿಸ್ಥಿತಿ ನಿರ್ವಹಿಸಲು ಸಾಧ್ಯ: ನಿರ್ಮಲಾ
Team Udayavani, Oct 1, 2022, 9:45 PM IST
ನವದೆಹಲಿ: ದೇಶದಲ್ಲಿನ ಹಣದುಬ್ಬರವು ನಿರ್ವಹಿಸಬಹುದಾದ ಮಟ್ಟದಲ್ಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಆರ್ಬಿಐನ ರೆಪೋ ದರ ಹೆಚ್ಚಳ ನಿರ್ಧಾರವು ಮಾರುಕಟ್ಟೆಗೆ ಧನಾತ್ಮಕವಾದ ಸಂದೇಶವನ್ನು ಕಳುಹಿಸಿದೆ ಎಂದಿದ್ದಾರೆ.
“ಭಾರತದ ಷೇರು ಮಾರುಕಟ್ಟೆಯನ್ನು ತೊರೆದಿದ್ದ ಶೇ.70ಕ್ಕೂ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆದಾರರು ಕಳೆದ ಎರಡು ತಿಂಗಳಲ್ಲಿ ಮರಳಿದ್ದಾರೆ. ಭಾರತ ಈಗ ಸದೃಢ ಆರ್ಥಿಕ ಚಟುವಟಿಕೆ ಪರ್ವವನ್ನು ಪ್ರವೇಶಿಸುತ್ತಿದೆ,’ ಎಂದರು.
ಮುಂಬರುವ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ದೊಡ್ಡ ಮಟ್ಟದ ಬಂಡವಾಳ ಹರಿದುಬರುವ ನಿರೀಕ್ಷೆ ಇದೆ. ದೊಡ್ಡ ಹೂಡಿಕೆದಾರರನ್ನು ಭಾರತದ ಕಡೆ ಆಕರ್ಷಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ನಿರ್ಮಲ ಸೀತಾರಾಮನ್ ಹೇಳಿದರು.
ಜಾಗತಿಕ ಬೆಳವಣಿಗೆಗಳಿಂದಾಗಿ ಕಂಪನಿಗಳು ಅನುಭವಿಸುತ್ತಿರುವ ಅಡಚಣೆಗಳ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಜಗತ್ತಿನಲ್ಲಿ ಏನು ಬೆಳವಣಿಗೆಗಳು ನಡೆಯುತ್ತಿವೆ ಎಂಬುದರ ಬಗ್ಗೆ ಕಂಪನಿಗಳು ಸದಾ ಕಣ್ಣು ಮತ್ತು ಕಿವಿ ತೆರೆದಿರಬೇಕಾಗುತ್ತದೆ ಎಂದರು.
ಕಂಪನಿಗಳ ದಿವಾಳಿ ಸಂಹಿತೆಗೆ ಸಂಬಂಧಿಸಿದಂತೆ ವೃತ್ತಿಪರರ ಪ್ರಮುಖ್ಯತೆಯನ್ನು ಮತ್ತು ಈ ಬಗ್ಗೆ ಕಂಪನಿಗಳು ಕಾಳಜಿ ವಹಿಸುವಂತೆ ಮಾಡಲು ಪ್ರಯತ್ನಗಳು ಹೆಚ್ಚಬೇಕು ಎಂದು ಸೀತಾರಾಮನ್ ಒತ್ತಿಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ