ಆರ್ಥಿಕ ಚೇತರಿಕೆ ನಿರ್ಮಲಾ ಚಿಕಿತ್ಸೆ


Team Udayavani, Aug 24, 2019, 5:03 AM IST

arthika

ನವದೆಹಲಿ: ಅಮೆರಿಕ ಮತ್ತು ಚೀನಾದ ಟ್ಯಾರಿಫ್ ಸಮರದ ನಡುವೆಯೇ, ಕುಸಿಯುತ್ತಿರುವ ಆರ್ಥಿಕತೆಗೆ ಉತ್ತೇ ಜನ ನೀಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮುಂದಾಗಿದ್ದಾರೆ. ಅದರಲ್ಲೂ ವಿದೇಶಿ ಹೂಡಿಕೆ, ಆಟೋ ಮತ್ತು ರಿಯಾಲ್ಟಿ ವಲಯದಲ್ಲಿನ ಕುಸಿತ ವನ್ನೇ ಗಣನೆಗೆ ತೆಗೆದುಕೊಂಡಿರುವ ಅವರು, ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಸಿರಿವಂತರ ಮೇಲಿನ ಮತ್ತು ವಿದೇಶಿ ಹೂಡಿಕೆದಾರರ ಮೇಲಿನ ತೆರಿಗೆಗಳ ರದ್ದು, ಹೊಸ ವಾಹನಗಳ ಖರೀದಿಗೂ ಅವಕಾಶ ಮಾಡಿಕೊಟ್ಟಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ 70 ಸಾವಿರ ಕೋಟಿ ರೂ.ಗಳನ್ನು ನೀಡಲಾಗಿದ್ದು, ಇದರಿಂದ ಹೊಸ ಸಾಲ ಸೃಷ್ಟಿಯಾಗಲು ಅವಕಾಶ ಹೆಚ್ಚಲಿದೆ. ಈ ಮೂಲಕ ಆಟೋ, ರಿಯಾಲ್ಟಿ ಮತ್ತಿತರ ರಿಟೇಲ್‌ ವಲಯದ ಸಾಲದ ಬೇಡಿಕೆ ಪ್ರಮಾಣ ಕುಗ್ಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಆಟೋ ವಲಯ: ದೇಶದಲ್ಲಿ ಸದ್ಯ ಆತಂಕಕ್ಕೆ ಸಿಲುಕಿರುವ ವಲಯವಾಗಿರುವ ಆಟೋಮೊಬೈಲ್‌ ಅನ್ನು ಪ್ರಮುಖ ವಾಗಿ ಪರಿಗಣಿಸಿರುವ ನಿರ್ಮಲಾ, ಹೊಸ ವಾಹನಗಳ ಖರೀದಿಗೆ ಪ್ರೋತ್ಸಾಹದಾಯಕ ಕ್ರಮಕ್ಕೆ ಮುಂದಾಗಿದ್ದಾರೆ. ಸರ್ಕಾರಿ ಇಲಾಖೆಗಳಿಗೆ ಹೊಸ ವಾಹನಗಳ ಖರೀದಿ ಮೇಲೆ ಇದ್ದ ನಿರ್ಬಂಧ ತೆಗೆದು ಹಾಕಲು ನಿರ್ಧರಿಸಲಾಗಿದ್ದು, ಈ ಮೂಲಕ ಹೆಚ್ಚಿನ ವಾಹನಗಳ ಖರೀದಿಗೆ ಅವಕಾಶ ಮಾಡಿಕೊಡಲಾ ಗಿದೆ. ಇದರ ಜತೆಯಲ್ಲೇ ಬಿಎಸ್‌ 4 ಮಾಲಿನ್ಯ ಗುಣ ಮಟ್ಟದ ವಾಹನಗಳನ್ನು 2020ರ ಮಾರ್ಚ್‌ ವರೆಗೂ ಖರೀದಿ ಮಾಡಲು ಅವಕಾಶ ನೀಡಲಾಗಿದೆ.

ಅಲ್ಲದೆ ಇವು ಗಳನ್ನು ತಮ್ಮ ನೋಂದಣಿ ಅವಧಿ ಮುಗಿವವರೆಗೂ ಬಳಕೆ ಮಾಡಲೂ ಅನುವು ನೀಡಲಾಗಿದೆ. ವಾಹನಗಳ ನೋಂದಣಿ ಶುಲ್ಕ ಏರಿಕೆ ನಿರ್ಧಾರ ವಾಪಸ್‌ ಪಡೆದು, 2020ರ ಜೂನ್‌ ಬಳಿಕ ಪರಿಶೀಲನೆ ಮಾಡುವ ಮಾತು ಗಳನ್ನಾಡಿದ್ದಾರೆ. 600 ರೂ. ಇದ್ದ ನೋಂದಣಿ ಶುಲ್ಕವನ್ನು 6000 ರೂ.ಗೆ ಏರಿಕೆ ಮಾಡಲು ಪ್ರಸ್ತಾಪ ಮಾಡ ಲಾಗಿ ತ್ತು. ಜತೆಗೆ ಎಲೆಕ್ಟ್ರಿಕ್‌ ವಾಹನ ಮತ್ತು ಸಾಮಾನ್ಯ ವಾಹನಗಳ ಖರೀದಿ ಪ್ರಕ್ರಿಯೆ ಹಾಗೆಯೇ ಮುಂದು ವರಿಯ ಲಿದೆ ಎಂದೂ ಹೇಳಿದ್ದಾರೆ.

ರಿಯಾಲ್ಟಿ ವಲಯ: ಗೃಹ ನಿರ್ಮಾಣ ವಲ ಯದ ಮೇಲೂ ದೃಷ್ಟಿ ಹರಿಸಿದ್ದಾರೆ ನಿರ್ಮಲಾ. ರಿಯಾಲ್ಟಿ ವಲಯದಲ್ಲಿನ ಪ್ರಮುಖ ಸಮಸ್ಯೆಯೇ ಗೃಹ ಸಾಲಕ್ಕೆ ಸಂಬಂಧಿಸಿದ್ದಾಗಿತ್ತು. ಈ ವರ್ಷ ವೊಂದ ರಲ್ಲೇ ಆರ್‌ಬಿಐ 110 ಮೂಲಾಂಶ ಗಳಷ್ಟು ರೆಪೋ ದರ ಇಳಿಕೆ ಮಾಡಿದ್ದರೂ, ಬಹುತೇಕ ಬ್ಯಾಂಕುಗಳು ಈ ಸೌಲಭ್ಯ ವನ್ನು ಗ್ರಾಹಕರಿಗೆ ತಲುಪಿಸಿಲ್ಲ. ಇನ್ನು ರೆಪೋ ದರ ಆಧರಿತ ಗೃಹ ಸಾಲವನ್ನು ಎಸ್‌ಬಿಐ ಪರಿಚಯಿಸಿದ್ದು, ಇದನ್ನು ಉಳಿದ ಬ್ಯಾಂಕುಗಳೂ ಸದ್ಯ ದಲ್ಲೇ ಅಳವಡಿಸಿಕೊಳ್ಳಲಿವೆ.

ಅಲ್ಲದೆ, ಆರ್‌ಬಿಐ ಇಳಿಕೆ ಮಾಡಿರುವ ರೆಪೋ ದರದ ಸೌಲಭ್ಯವನ್ನು ಗ್ರಾಹಕರಿಗೆ ವರ್ಗಾಯಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ಅವು ಒಪ್ಪಿವೆ ಎಂದೂ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಹೀಗಾಗಿ ರೆಪೋ ದರಕ್ಕೆ ಹೊಂದಿಕೊಂಡಿರುವ ಗೃಹ ಮತ್ತು ವಾಹನ ಮೇಲಿನ ಸಾಲದ ಬಡ್ಡಿದರವು ಕಡಿಮೆಯಾಗುವುದರಿಂದ ಇಎಂಐ ಕೂಡ ಕಡಿಮೆಯಾಗಲಿದೆ ಎಂದಿದ್ದಾರೆ. ಸಾಲ ಮುಗಿದ 15 ದಿನಗಳಲ್ಲಿ ಬ್ಯಾಂಕ್‌ನಿಂದ ದಾಖಲೆ ವಾಪಸ್‌ ನೀಡಲಾಗುವುದು ಮತ್ತು ಸಾಲ ಅರ್ಜಿಗಳ ಆನ್‌ಲೈನ್‌ ಟ್ರ್ಯಾಕಿಂಗ್‌ ಸೌಲಭ್ಯವನ್ನೂ ಕಲ್ಪಿಸಲು ನಿರ್ಧಾರ ಮಾಡಲಾಗಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.

ಸಿರಿವಂತರ ಮೇಲಿನ ತೆರಿಗೆ ರದ್ದು: ಜೆಟ್‌ನಲ್ಲಿ ಶ್ರೀಮಂತರಿಗೆ ಹೆಚ್ಚುವರಿ ತೆರಿಗೆ ವಿಧಿಸಿದ್ದರಿಂದಾಗಿ, 2 ಕೋಟಿ ರೂ.ಗಳಿಂದ 5 ಕೋಟಿ ರೂ. ಆದಾಯ ಹೊಂದಿರುವವರ ಮೇಲೆ ಶೇ.35.88 ರಿಂದ ಶೇ.39ರಷ್ಟು ಹಾಗೂ 5 ಕೋಟಿ ರೂ.ಗಿಂತ ಹೆಚ್ಚಿನ ಆದಾಯ ಹೊಂದಿರುವವರಿಗೆ ಶೇ. 42.7 ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಈಗ ಬಜೆಟ್‌ಗೂ ಮೊದಲಿದ್ದ ಬಡ್ಡಿ ದರವೇ ಮರುಜಾರಿಯಾಗಲಿದೆ ಎಂದು ನಿರ್ಮಲಾ ಹೇಳಿದ್ದಾರೆ. ಅಲ್ಲದೆ, ಸ್ಟಾರ್ಟಪ್‌ಗ್ಳಲ್ಲಿ ಹೂಡಿಕೆ ಮಾಡುವ ಹೂಡಿಕೆದಾರರ ಸಂಕಷ್ಟ ನಿವಾರಣೆಗೆ ಏಂಜೆಲ್‌ ತೆರಿಗೆಯನ್ನೂ ಹಿಂಪಡೆಯಲಾಗಿದೆ.

ನೋಟಿಸ್‌ಗಳ ತೊಂದರೆ ಕಡಿಮೆ: ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ನೀತಿ ಉಲ್ಲಂಘನೆಯನ್ನು ಕ್ರಿಮಿನಲ್‌ ಅಪರಾಧ ಎಂದು ಪರಿಗಣಿಸದಿರಲು ನಿರ್ಧಾರ ಮಾಡಲಾಗಿದೆ. ಅ.1 ರಿಂದ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಎಲ್ಲ ಐಟಿ ನೋಟಿಸ್‌ ಜಾರಿಯಾಗಲಿದೆ. ಅಲ್ಲದೆ, ನವೋದ್ಯಮಗಳಿಗೆ ಏಂಜೆಲ್‌ ಟ್ಯಾಕ್ಸ್‌ನಿಂದ ಮುಕ್ತಿ, ತೆರಿಗೆ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ವಿಭಾಗ ಸೃಷ್ಟಿಸಲು ನಿರ್ಧಾರ ಮಾಡಲಾಗಿದೆ. ಸಣ್ಣ ಉದ್ಯಮಗಳ ಸಾಲದ ಒಂದು ಬಾರಿಯ ಸೆಟಲ್‌ಮೆಂಟ್‌ಗೆ ಪಾರದರ್ಶಕ ವ್ಯವಸ್ಥೆ ಮಾಡಿಕೊಡಲಾಗಿದೆ.

30 ದಿನದಲ್ಲಿ ಜಿಎಸ್‌ಟಿ ರಿಫ‌ಂಡ್‌: ಎಂಎಸ್‌ಎಂಇಗಳಿಗೆ ಇದುವರೆಗೆ ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ರಿಫ‌ಂಡ್‌ ಅನ್ನು ಇನ್ನು 30 ದಿನಗಳೊಳಗೆ ನೀಡಲಾಗುವುದು. ಹೊಸದಾಗಿ ಬರುವ ರಿಟರ್ನ್ಸ್ ಗೆ 60 ದಿನದಲ್ಲಿ ರಿಫ‌ಂಡ್‌ ಮಾಡಿಸುವ ವ್ಯವಸ್ಥೆ ಮಾಡಲು ಜಿಎಸ್‌ಟಿ ವ್ಯವಸ್ಥೆಯನ್ನೇ ಸರಳೀಕರಣ ಮಾಡಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.