ನಿಥಾರಿ ಕೊಲೆ ಪ್ರಕರಣ: ದೋಷಿಗಳಿಗೆ ಗಲ್ಲು ಶಿಕ್ಷೆ
Team Udayavani, Jul 25, 2017, 6:40 AM IST
ಗಾಜಿಯಾಬಾದ್: ನಿಥಾರಿ ಸರಣಿ ಹತ್ಯೆ ಪ್ರಕರಣದ ದೋಷಿಗಳಾದ ಉದ್ಯಮಿ ಮೋನಿಂದರ್ ಸಿಂಗ್ ಪಾಂಡೆ ಮತ್ತು ಆತನ ಸಹಾಯಕ ಸುರೀಂದರ್ ಕೋಲಿಗೆ ಸಿಬಿಐ ವಿಶೇಷ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮನೆಗೆಲಸದ ಸಹಾಯಕಿ ಪಿಂಕಿ ಸರ್ಕಾರ್ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಈ ತೀರ್ಪು ನೀಡಲಾಗಿದೆ. ಜತೆಗೆ, ಇದನ್ನು ಅಪರೂಪದಲ್ಲಿ ಅಪರೂಪದ ಪ್ರಕರಣವೆಂದು ಪರಿಗಣಿಸಿದ್ದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ. 2006ರ ಡಿಸೆಂಬರ್ನಲ್ಲಿ ನೋಯ್ಡಾದ ನಿಠಾರಿಯ ಇಬ್ಬರು ನಿವಾಸಿಗಳು ತಮ್ಮ ಮಕ್ಕಳು ಕಣ್ಮರೆಯಾದ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಆ ಕೇಸಿನ ತನಿಖೆ ನಡೆಸಿದ ಪೊಲೀಸರಿಗೆ ಮೋನಿಂದರ್ ಸಿಂಗ್ ನಿವಾಸದಲ್ಲಿ 19 ಮಂದಿಯ ತಲೆಬುರುಡೆಗಳು ಸಿಕ್ಕಿದ್ದವು. ಸಂತ್ರಸ್ತರಲ್ಲಿ ಬಹುತೇಕರು ಅಪ್ರಾಪ್ತ ವಯಸ್ಸಿನವರಾಗಿದ್ದರು. ಪಾಂಡೆ, ಕೋಲಿ ವಿರುದ್ಧ 19 ಕೊಲೆ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ