ರಾಜ್ಯದ ಹಲವು ಹೆದ್ದಾರಿಗಳ ಉನ್ನತೀಕರಣ: ನಿತಿನ್ ಗಡ್ಕರಿ
Team Udayavani, Mar 24, 2023, 7:20 AM IST
ನವದೆಹಲಿ: ಕರ್ನಾಟಕದ ಹೊನ್ನಾವರ-ಕಿತ್ತೂರು ರಾಷ್ಟ್ರೀಯ ಹೆದ್ದಾರಿ ಸೇರಿ ಹಲವು ಹೆದ್ದಾರಿಗಳನ್ನು ಉನ್ನತೀಕರಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “653 ಕೋಟಿ ರೂ. ವೆಚ್ಚದಲ್ಲಿ ಎನ್ಎಚ್-69, ಬೆಂಗಳೂರು-ಚಿತ್ತೂರು ಮಾರ್ಗವನ್ನು ನಾಲ್ಕು ಪಥದ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುವುದು. ಸಿಂದಿಗೇರಿ-ಬಳ್ಳಾರಿ ರಸ್ತೆ ವಿಸ್ತರಣೆಗೆ 120.5 ಕೋಟಿ ರೂ. ಮೀಸಲಿಡಲಾಗಿದೆ. ಎನ್-150 ಎ ಮಾರ್ಗದಲ್ಲಿ 19.8 ಕಿ.ಮೀ. ರಸ್ತೆ ವಿಸ್ತರಣೆಯಾಗಲಿದೆ,’ ಎಂದು ಹೇಳಿದ್ದಾರೆ.
“142 ಕೋಟಿ ರೂ. ವೆಚ್ಚದಲ್ಲಿ ರಾಯಚೂರು ಜಿಲ್ಲೆಯ ವೆಂಕಟೇಶ್ವರ ಕ್ಯಾಂಪ್ನಿಂದ ದಡೆಸೊಗೂರು ಕ್ಯಾಂಪ್ ರಸ್ತೆವರೆಗೆ ಮಾರ್ಗ ಅಭಿವೃದ್ಧಿಪಡಿಸಲಾಗುವುದು. ಅಲ್ಲದೇ 2022-23ನೇ ಸಾಲಿನಲ್ಲಿ ಎಕ್ಸ್ಪ್ರೆಸ್ ಕಾರಿಡಾರ್ ಮಾದರಿಯಲ್ಲಿ 6,910 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ