ಬಿಜೆಪಿ- ಜೆಡಿಯು ಜಗಳ: ಸೋನಿಯಾಗೆ ಕರೆ ಮಾಡಿದ ನಿತೀಶ್ ಕುಮಾರ್
Team Udayavani, Aug 8, 2022, 9:45 AM IST
ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಜನತಾ ದಳ (ಯು) ಮತ್ತು ಬಿಹಾರದ ಮಿತ್ರಪಕ್ಷ ಬಿಜೆಪಿಯ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರವಿವಾರ ನಡೆದ ನೀತಿ ಆಯೋಗದ ಸಭೆಯನ್ನು ತಪ್ಪಿಸಿಕೊಂಡ ಬಿಹಾರ ಸಿಎಂ ನಿತೀಶ್, ಇದೀಗ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ದೂರವಾಣಿ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷರಾಗಿದ್ದ ನೀತಿ ಆಯೋಗದ ಸಭೆಗೆ ಬಿಹಾರ ಸಿಎಂ ನಿತೀಶ್ ಗೈರಾಗಿದ್ದರು. ಇದು ಹಲವು ಸಂಶಯಗಳಿಗೆ ಕಾರಣವಾಗಿತ್ತು.
ಕಳೆದ ಕೆಲವು ತಿಂಗಳಿನಿಂದ ನಿತೀಶ್ ಕುಮಾರ್ ಮತ್ತು ಬಿಜೆಪಿ ನಡುವೆ ಶೀತಲ ಸಮರ ನಡೆಯುತ್ತಿದೆ. ಕಳೆದ ತಿಂಗಳು ಅಂದರೆ ಜುಲೈ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆದಿದ್ದ ಎಲ್ಲ ಮುಖ್ಯಮಂತ್ರಿಗಳ ಸಭೆಯಲ್ಲಿ ನಿತೀಶ್ ಕುಮಾರ್ ಭಾಗವಹಿಸಿರಲಿಲ್ಲ. ಅದರ ನಂತರ, ಜುಲೈ 22 ರಂದು ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪಿಎಂ ಮೋದಿ ಆಯೋಜಿಸಿದ್ದ ಬೀಳ್ಕೊಡುಗೆ ಔತಣಕೂಟಕ್ಕೂ ನಿತೀಶ್ ಗೈರಾಗಿದ್ದರು.
ಇದನ್ನೂ ಓದಿ:ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ : ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ನಿತೀಶ್ ಕುಮಾರ್ ಬೆಂಬಲಿಸಿದರೂ, ಜುಲೈ 22 ರಂದು ನಡೆದ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.
ಕೇಂದ್ರ ಸಂಪುಟಕ್ಕೆ ಸೇರುವುದಿಲ್ಲ : ಮುಂದಿನ ದಿನಗಳಲ್ಲಿ ಕೇಂದ್ರ ಸಂಪುಟ ವಿಸ್ತರಣೆ ನಡೆದರೆ ಜೆಡಿಯು ಸೇರುವುದಿಲ್ಲ. ಹಾಗೆಂದು ಬಿಜೆಪಿ ಜತೆಗೆ ಯಾವ ಭಿನ್ನಾಭಿಪ್ರಾಯಗಳೂ ಇಲ್ಲವೆಂದು ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಹೇಳಿದ್ದಾರೆ.
ಪಾಟ್ನಾದಲ್ಲಿ ಮಾತನಾಡಿದ ಅವರು, ಪಾಟ್ನಾದಲ್ಲಿ ಮಾತನಾಡಿದ ಅವರು, 2019ರ ನಿಲುವಿಗೆ ನಾವು ಬದ್ಧರಾಗಿಯೇ ಮುಂದುವರಿಸಲು ನಿರ್ಧರಿಸಿದ್ದೇವೆ ಎಂದರು. ಈ ಬಗ್ಗೆ ಬಿಹಾರ ಸಿಎಂ ನಿತೀಶ್ ಅವರ ತೀರ್ಮಾನವೇ ಅಂತಿಮ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ