ಮಂದಿರ ವಿವಾದ ಇತ್ಯರ್ಥಗೊಳಿಸಿ: ಬಿಜೆಪಿಗೆ ನಿತೀಶ್ ಕುಮಾರ್ ಆಗ್ರಹ
Team Udayavani, Dec 24, 2018, 6:10 AM IST
ಹೊಸದಿಲ್ಲಿ: ರಾಮಮಂದಿರ ವಿವಾದವನ್ನು ನ್ಯಾಯಾಲಯ ಅಥವಾ ಮಾತುಕತೆಯ ಮೂಲಕ ಬೇಗನೇ ಬಗೆಹರಿಸಬೇಕೆಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಯನ್ನು ಆಗ್ರಹಿಸಿದ್ದಾರೆ. “”ರಾಮ ಮಂದಿರ ವಿವಾದ ಇತ್ಯರ್ಥವಾಗದೇ ದಶಕಗಳೇ ಉರುಳಿವೆ.
ಈಗಾಲಾದರೂ ಇದು ಇತ್ಯರ್ಥವಾಗಬೇಕಿದೆ” ಎಂದಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ತರಬೇಕೆಂದು ಹಿಂದೂ ಪರ ಸಂಘಟನೆಗಳು, ಬಿಜೆಪಿಯ ಸೈದ್ಧಾಂತಿಕ ಸಂಸ್ಥೆಯಾದ ಆರ್ಎಸ್ಎಸ್ ಈಗಾಗಲೇ ಕೇಂದ್ರ ಸರಕಾರವನ್ನು ಆಗ್ರಹಿಸುತ್ತಿರುವ ಬೆನ್ನಲ್ಲೇ ನಿತೀಶ್ರ ಈ ಹೇಳಿಕೆ ಕುತೂಹಲ ಮೂಡಿಸಿದೆ.
ಬಿಜೆಪಿಯಿಂದ ಮಾತ್ರ ಸಾಧ್ಯ: ಮತ್ತೂಂದೆಡೆ, ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಲಕ್ನೋದ ಸ್ಮತಿ ಉಪವನದಲ್ಲಿ ಏರ್ಪಡಿಸಲಾಗಿದ್ದ ಯುವ ಕುಂಭ ಸಮ್ಮೇಳನದಲ್ಲಿ ಮಾತನಾಡಿದ ಅವರು, “”ಬಿಜೆಪಿ ಹೊರತುಪಡಿಸಿ ಯಾವ ಪಕ್ಷದಿಂದಲೂ ರಾಮಮಂದಿರ ಕಟ್ಟಲು ಸಾಧ್ಯವಿಲ್ಲ. ಆ ಮಂದಿ(ಕಾಂಗ್ರೆಸ್) ಜನಿವಾರವನ್ನು ಕೇವಲ ಮತಗಳಿಗಾಗಿ ಹಾಕಿಕೊಳ್ಳುತ್ತಾರೆ. ಅದೇ ಜನ ಹಿಂದೆ ರಾಮ, ಕೃಷ್ಣರು ಇದ್ದರೆಂಬುದನ್ನೇ ಅಲ್ಲಗಳೆದಿದ್ದರು. ಅಂಥವರಿಂದ ರಾಮ ಮಂದಿರವನ್ನು ನಿರೀಕ್ಷಿಸುವುದು ಸಾಧ್ಯವಿಲ್ಲ” ಎಂದು ಗುಡುಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ