ನಕಲಿ ಮದ್ಯ ಸೇವಿಸಿ ಸಾವು: ನೀವೇ ಕುಡಿದಿದ್ದೀರಿ… ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ವಿರುದ್ಧ ನಿತೀಶ್ ಕಿಡಿ
Team Udayavani, Dec 14, 2022, 6:19 PM IST
ಬಿಹಾರ: ನಕಲಿ ಮದ್ಯ ಸೇವಿಸಿ ಹದಿನೇಳು ಮಂದಿ ಸಾವನ್ನಪ್ಪಿದ್ದ ಕುರಿತು ವಿಧಾನ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಟನೆಗೆ ಇಳಿದ ಬಿಜೆಪಿ ವಿರುದ್ಧ ನಿತೀಶ್ ಕುಮಾರ್ ಕೆಂಡಾಮಂಡಲರಾದ ಘಟನೆ ನಡೆದಿದೆ.
ಬಿಹಾರದಲ್ಲಿ ಬುಧವಾರ ನಕಲಿ ಮದ್ಯ ಸೇವಿಸಿ ಸುಮಾರು ಹದಿನೇಳು ಮಂದಿ ಸಾವನ್ನಪ್ಪಿದ್ದು ಈ ವಿಚಾರವಾಗಿ ಸರಕಾರ ಅಕ್ರಮ ಚಟುವಟಿಕೆಗಳಿಗೆ ಸಹಕಾರ ನೀಡುತ್ತಿದೆ ಎಂದು ವಿಧಾನ ಸಭೆಯಲ್ಲಿ ಸದನದ ಬಾವಿಗಿಳಿದು ಬಿಜೆಪಿ ಶಾಸಕರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರತಿಭಣೆಗಿಳಿದಿದ್ದಾರೆ.
ಈ ವೇಳೆ ತಾಳ್ಮೆ ಕಳೆದುಕೊಂಡ ನಿತೀಶ್ ಕುಮಾರ್ ಏನಾಗಿದೆ ನಿಮಗೆ ? ಪ್ರತಿಭಟಿಸುವವರನ್ನು ಸದನದಿಂದ ಹೊರಗೆ ಹಾಕಿ… ನೀವು ಕುಡಿದಿದ್ದೀರಿ ಎಂದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರ ಮೇಲೆ ಹರಿಹಾಯ್ದಿದ್ದಾರೆ. ಈ ಹೇಳಿಕೆಯಿಂದ ಕೋಪಗೊಂಡ ಬಿಜೆಪಿ ಶಾಸಕರು ಈ ಕೂಡಲೇ ನಿತೀಶ್ ಕುಮಾರ್ ಅವರು ಈ ಹೇಳಿಕೆಯನ್ನು ಹಿಂಪಡೆಯಬೇಕು ಅಲ್ಲದೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಪಟ್ಟು ಹಿಡಿದ ಪ್ರಸಂಗ ನಡೆಯಿತು.
ನಿತೀಶ್ ಕುಮಾರ್ ಅವರು ಬಿಜೆಪಿಯನ್ನು ತೊರೆದು ವಿರೋಧ ಪಕ್ಷಗಳೊಂದಿಗೆ ಹೊಸ ಸರ್ಕಾರವನ್ನು ರಚಿಸಿದ ನಂತರ ಇದು ಎರಡನೇ ಬಿಹಾರ ವಿಧಾನಸಭೆ ಅಧಿವೇಶನವಾಗಿದೆ.
ಇದನ್ನೂ ಓದಿ: 2031ರ ವೇಳೆಗೆ ದೇಶದಲ್ಲಿ 20 ಹೊಸ ಪರಮಾಣು ಸ್ಥಾವರಗಳು ಆರಂಭ: ಸಚಿವ ಜಿತೇಂದ್ರ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?