ಪಕ್ಷ ವಿರೋಧಿ ಚಟುವಟಿಕೆ: 21 ಜೆಡಿಯು ಸದಸ್ಯರ ಉಚ್ಚಾಟನೆ
Team Udayavani, Aug 14, 2017, 3:38 PM IST
ಪಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು, ಪಕ್ಷ ವಿರೋಧ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪದ ಮೇಲೆ ಪಕ್ಷದ 21 ಸದಸ್ಯರನ್ನು ಅವರ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಿದೆ.
ರಾಜ್ಯಸಭೆಯಲ್ಲಿ ಜೆಡಿಯು ಪಕ್ಷದ ನಾಯಕರಾಗಿದ್ದ ಹಿರಿಯ ಸದಸ್ಯ ಶರದ್ ಯಾದವ್ ಅವರನ್ನು ಬದಲಾಯಿಸಿ ಅವರ ಸ್ಥಾನದಲ್ಲಿ ಚಂದ್ರ ಪ್ರಸಾದ್ ಸಿಂಗ್ ಅವರನ್ನು ನೇಮಿಸಲಾದ ಬೆನ್ನಿಗೇ ಇದೀಗ ಜೆಡಿಯು ತನ್ನ 21 ಸದಸ್ಯರನ್ನು ಉಚ್ಚಾಟಿಸುವ ಕ್ರಮ ತೆಗೆದುಕೊಂಡಿದೆ.
ವಜಾಗೊಂಡಿರುವ 21 ಸದಸ್ಯರ ಪೈಕಿ ಮಾಜಿ ಸಚಿವ ರಮಾಯಿ ರಾಮ್, ಮಾಜಿ ಸಂಸದ ಅರ್ಜುನ್ ರಾಯ್ ಮತ್ತು ಮಾಜಿ ಶಾಸಕ ರಾಜ್ಕಿಶೋರ್ ಸಿನ್ಹಾ ಸೇರಿದ್ದಾರೆ.
ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್ ಅವರು 21 ಸದಸ್ಯರನ್ನು ಪಕ್ಷದಿಂದ ಉಚ್ಚಾಟಿಸಲಾಗಿರುವುದನ್ನು ದೃಢೀಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ