ಜೆಡಿಯು ಅಧ್ಯಕ್ಷ ಸ್ಥಾನ ತ್ಯಜಿಸಿದ ನಿತೀಶ್ ಕುಮಾರ್; ಆರ್.ಸಿ.ಪಿ ಸಿಂಗ್ ಹೊಸ ಅಧ್ಯಕ್ಷ
Team Udayavani, Dec 28, 2020, 8:20 AM IST
ಪಾಟ್ನಾ: ಜೆಡಿಯುನ ಹೊಸ ಅಧ್ಯಕ್ಷರನ್ನಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಪ್ತ, ರಾಜ್ಯಸಭಾ ಸದಸ್ಯ ರಾಮಚಂದ್ರ ಪ್ರಸಾದ್ ಸಿಂಗ್ (ಆರ್.ಸಿ.ಪಿ)ಅವರನ್ನು ನೇಮಕ ಮಾಡಲಾಗಿದೆ.
ಪಾಟ್ನಾದಲ್ಲಿ ಭಾನುವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಿಂಗ್ ಅವರ ನೇಮಕಕ್ಕೆ ಖುದ್ದು ನಿತೀಶ್ ಕುಮಾರ್ ಅವರೇ ಸೂಚನೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಮಾತನಾಡಿದ ನಿತೀಶ್ ಮುಂದಿನ ಹಂತದಲ್ಲಿ ಮುಖ್ಯಮಂತ್ರಿಯಾಗುವ ಆಸೆ ಇಲ್ಲ. ಜನರೇ ಮುಂದಿನ ದಿನಗಳಲ್ಲಿ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆ ಕಳೆದು ಎರಡು ತಿಂಗಳು ಕಳೆಯುವಷ್ಟರಲ್ಲಿಯೇ ಜೆಡಿಯು ಅಧ್ಯಕ್ಷ ಸ್ಥಾನದಲ್ಲಿ ಬದಲು ಮಾಡಲಾಗಿದೆ. ಈ ಬೆಳವಣಿಗೆ ಮೂಲಕ ಬಿಜೆಪಿ-ಜೆಡಿಯು ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ಅಂಶ ಕಾಣುವಂತಾಗಿದೆ. ಉತ್ತರ ಪ್ರದೇಶ ಕೇಡರ್ನ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ರಾಮಚಂದ್ರ ಪ್ರಸಾದ್ ಸಿಂಗ್ 23 ವರ್ಷಗಳಿಂದ ನಿತೀಶ್ ಕುಮಾರ್ ಆಪ್ತರಾಗಿದ್ದಾರೆ.
ಕಾರ್ಯಕಾರಿಣಿ ಬಳಿಕ ಮಾತನಾಡಿದ ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಬಿಜೆಪಿ ಹೆಸರು ಉಲ್ಲೇಖೀಸದೆ, ಲವ್ ಜಿಹಾದ್ ಬಗ್ಗೆ ದೇಶದಲ್ಲಿ ಅಸೂಯೆಯ ವಾತಾವರಣ ಮೂಡಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್