ಉತ್ಪಾದನಾ ವೆಚ್ಚ + ಬೆಂಬಲ ಬೆಲೆ ಕೃಷಿಕರ ಸಮಸ್ಯೆಗೆ ಇದೇ ಪರಿಹಾರ
Team Udayavani, Jun 13, 2017, 1:56 AM IST
ಪಟ್ನಾ/ಮುಂಬಯಿ: ದೇಶದ ಹಲವು ಭಾಗಗಳಲ್ಲಿ ಕಂಡುಬರುತ್ತಿರುವ ಕೃಷಿಕರ ಸಮಸ್ಯೆಗಳಿಗೆ ಸಾಲ ಮನ್ನಾ ಮಾತ್ರವೇ ಪರಿಹಾರ ವಲ್ಲ ಎಂದು ಬಿಹಾರ ಸಿಎಂ ನಿತೀಶ್ಕುಮಾರ್ ಹೇಳಿದ್ದಾರೆ. ಕೇಂದ್ರದ ಎನ್ಡಿಎ ಸರಕಾರವು ನೀಡಿರುವ ಆಶ್ವಾಸನೆಯಂತೆ ರೈತರಿಗೆ ಉತ್ಪಾದನಾ ವೆಚ್ಚ ಮತ್ತು ಕನಿಷ್ಠ ಬೆಂಬಲ ಬೆಲೆ ನೀಡಿದರೆ ಕೃಷಿಕರ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದಿದ್ದಾರೆ ನಿತೀಶ್. ಲೋಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿ ವಲಯದ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿದೆ. ಆದರೆ, ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತವಾದ ದರವನ್ನು ಪಡೆಯುತ್ತಿಲ್ಲ. ಸಮಸ್ಯೆಯಿರುವುದು ಇಲ್ಲಿ. ಸಾಲ ಮನ್ನಾ ಮಾಡಿದಾಕ್ಷಣ ಎಲ್ಲ ಸಮಸ್ಯೆಯೂ ಪರಿಹಾರವಾಗುವುದಿಲ್ಲ. ಕೇಂದ್ರ ಸರಕಾರವು ರೈತರ ಬೆಳೆಗಳ ಉತ್ಪಾದನಾ ವೆಚ್ಚ ಮತ್ತು ಶೇ.50ರಷ್ಟು ಬೆಂಬಲ ಬೆಲೆ ನೀಡಿದರೆ ಸಮಸ್ಯೆಯೇ ಇರುವುದಿಲ್ಲ’ ಎಂದು ಹೇಳಿದ್ದಾರೆ.
ಶ್ರೀಮಂತರಿಗಿಲ್ಲ ಮನ್ನಾ
ಏತನ್ಮಧ್ಯೆ, ಮಹಾರಾಷ್ಟ್ರ ಸರಕಾರ ಘೋಷಿಸಿರುವ ರೈತರ ಸಾಲ ಮನ್ನಾದಲ್ಲಿ ಶ್ರೀಮಂತ ರೈತರನ್ನು ಹೊರಗಿಡುವ ಸಾಧ್ಯತೆಯಿದೆ ಎಂದು ಹಿರಿಯ ಸಚಿವರೊಬ್ಬರು ಸೋಮವಾರ ಮಾಹಿತಿ ನೀಡಿದ್ದಾರೆ. ಸರಕಾರವು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನ ಕುರಿತು ಆ ಸಮಿತಿಯೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಶ್ರೀಮಂತ ರೈತರನ್ನು ಸಾಲ ಮನ್ನಾ ವ್ಯಾಪ್ತಿಯಿಂದ ಹೊರಗಿಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಚಂದ್ರಕಾಂತ್ ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ