ಡಿಸಿಎಂ ಪಟ್ಟ ತ್ಯಜಿಸಿ: ಲಾಲು ಪುತ್ರನಿಗೆ ಪರೋಕ್ಷ ಸೂಚನೆ
Team Udayavani, Jul 12, 2017, 2:40 AM IST
ಹೊಸದಿಲ್ಲಿ/ಪಟ್ನಾ: ನಿತೀಶ್ಕುಮಾರ್ ನೇತೃತ್ವದ ಜೆಡಿಯು ಮತ್ತು ಲಾಲು ನೇತೃತ್ವದ ಆರ್ಜೆಡಿ ನಡುವಿನ ವೈಮನಸ್ಸು ಹೆಚ್ಚಾಗುತ್ತಿರುವ ಬೆನ್ನಲ್ಲೇ ಲಾಲು ಪುತ್ರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಭ್ರಷ್ಟಾಚಾರ ಪ್ರಕರಣ ರೋಚಕ ತಿರುವು ಪಡೆದಿದೆ. ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೋಮವಾರ ತೇಜಸ್ವಿ ಯಾದವ್ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಘೋಷಿಸಿದ್ದರು. ಈಗ, ಮಂಗಳವಾರ ನಾಯಕರ ಸಭೆ ನಡೆಸಿದ ನಿತೀಶ್ಕುಮಾರ್, ತತ್ವ, ಸಿದ್ಧಾಂತಗಳ ವಿಚಾರದಲ್ಲಿ ರಾಜಿ ಆಗಲ್ಲ, ಭ್ರಷ್ಟಾಚಾರ ವಿರುದ್ದ ಸಹನೆ ಇಲ್ಲವೇ ಇಲ್ಲ ಎಂದಿದ್ದು, ಇನ್ನು 4 ದಿನಗಳಲ್ಲಿ ರಾಜೀನಾಮೆ ಬಗ್ಗೆ ತೇಜಸ್ವಿ ಯಾದವ್ ಅವರೇ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಬುಧವಾರ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ತೇಜಸ್ವಿ ಯಾದವ್ ಜತೆ ಅಂತಿಮವಾಗಿ ತೀರ್ಮಾನಿಸಲಾಗುತ್ತದೆ ಎಂದು ಜೆಡಿಯು ಮೂಲಗಳು ಹೇಳಿವೆ. ಪಕ್ಷದ ಸಭೆಯ ಬಗ್ಗೆ ವಿವರಣೆ ನೀಡಿದ ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರು ಸಾರ್ವಜನಿಕರನ್ನು ಎದುರಿಸಬೇಕು ಮತ್ತು ನ್ಯಾಯಾಲಯದಿಂದ ಅವರ ವಿರುದ್ಧ ಆರೋಪಗಳು ಸುಳ್ಳು ಎಂದು ಸಾಬೀತಾಗಬೇಕು ಎಂದು ನಿತೀಶ್ ಹೇಳಿದ್ದಾರೆ ಎಂದರು. ಬಿಹಾರ ಸರಕಾರ ಅಲ್ಪಮತಕ್ಕೆ ಕುಸಿದರೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಹಾರ ಬಿಜೆಪಿ ಘಟಕ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…