ಗಾಂಧಿ ಹೆಸರಲ್ಲಿ ನಿತೀಶ್-ಲಾಲು ಪರಸ್ಪರ ಕೆಸರೆರಚಾಟ
Team Udayavani, Aug 10, 2017, 8:20 AM IST
ಪಟ್ನಾ: ಮಹಾತ್ಮಾ ಗಾಂಧಿಯ ಹೆಸರನ್ನು ಹೇಳಿಕೊಂಡೇ ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರು ಪರಸ್ಪರ ವಾಗ್ಧಾಳಿ ನಡೆಸಿಕೊಂಡ ಘಟನೆ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತ ನಾಡಿದ ಸಿಎಂ ನಿತೀಶ್, “ಮಾನವನ ಅಗತ್ಯಗಳನ್ನು ಪೂರೈಸುವಷ್ಟು ಸಾಮರ್ಥ್ಯ ಈ ಭೂಮಿಗಿದೆ. ಆದರೆ, ದುರಾಸೆಯನ್ನಲ್ಲ ಎಂದು 1942ರ ಆ. 9ರಂದು ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡುವಾಗ ಮಹಾತ್ಮಾ ಗಾಂಧಿ ಅವರು ಹೇಳಿದ್ದರು. ಈಗಲೂ ಹೆಚ್ಚುತ್ತಿರುವ ಇಂಥ ದುರಾಸೆಯನ್ನು ಹೋಗಲಾಡಿಸುವ ಅಗತ್ಯವಿದೆ’ ಎಂದರು. ಈ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತಿರುವ ಲಾಲು ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದರು. ಇದಕ್ಕೆ ಮತ್ತೂಂದು ಕಾರ್ಯಕ್ರಮದಲ್ಲಿ ತಿರುಗೇಟು ನೀಡಿದ ಲಾಲು ಯಾದವ್, “ಗಾಂಧೀಜಿ ಅವರು ದುರಾಸೆ ಕುರಿತು ಸರಿಯಾಗಿಯೇ ಹೇಳಿದ್ದಾರೆ. ಆದರೆ, ರಾಜಕೀಯ ಲಾಲಸೆ ಎನ್ನುವುದು ಭ್ರಷ್ಟಾಚಾರಕ್ಕಿಂತಲೂ ಅಪಾಯಕಾರಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ