ಸಚಿನ್ ಪೈಲಟ್ ಬಣಕ್ಕೆ ಮತ್ತೆ ರಿಲೀಫ್ ನೀಡಿದ ಕೋರ್ಟ್: ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ
Team Udayavani, Jul 24, 2020, 12:51 PM IST
ಜೈಪುರ: ರಾಜಸ್ಥಾನದ ಮಾಜಿ ಡಿಸಿಎಂ ಸಚಿನ್ ಪೈಲಟ್ ಮತ್ತು ಬೆಂಬಲಿತ ಶಾಸಕರ ವಿರುದ್ಧ ಸೋಮವಾರದವರೆಗೆ ಯಾವುದೇ ಕ್ರಮ ಕೈಗೊಳ್ಳಬಾರದು. ಯಥಾಸ್ಥಿತಿ ಮುಂದುವರಿಸಬೇಕು ಎಂದು ರಾಜಸ್ಥಾನ ಹೈಕೋರ್ಟ್ ಇಂದು ರಾಜಸ್ಥಾನ ವಿಧಾನಸಭಾ ಸ್ಪೀಕರ್ ಗೆ ಆದೇಶ ನೀಡಿದೆ.
ಈ ಆದೇಶದಿಂದ ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಶಾಸಕರಿಗೆ ಸ್ವಲ್ಪ ಮಟ್ಟಿನ ರಿಲೀಫ್ ಸಿಕ್ಕಿದೆ.
ಪೈಲಟ್ ಮತ್ತು ಬೆಂಬಲಿತ 18 ಶಾಸಕರನ್ನು ಸ್ಪೀಕರ್ ಸಿ ಪಿ ಜೋಶಿ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿಲಾಗಿದ್ದ ಅರ್ಜಿ ವಿಚಾರಣೆ ನಡೆಸುತ್ತಿರುವ ಪೀಠ, ಸಚಿನ್ ಪೈಲಟ್ ಬಣ ಮನವಿ ಮಾಡಿಕೊಂಡ ಕಾರಣ ಯೂನಿಯನ್ ಆಫ್ ಇಂಡಿಯಾವನ್ನು ಕಕ್ಷಿದಾರರನ್ನಾಗಿ ಪರಿಗಣಿಸಲು ಇಂದು ಒಪ್ಪಿಗೆ ನೀಡಿದೆ.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ‘ಯಥಾಸ್ಥಿತಿ’ ಕಾಪಾಡಿಕೊಂಡ ರಾಜಸ್ಥಾನ್ ಹೈಕೋರ್ಟ್, ಸಚಿನ್ ಪೈಲಟ್ ಮತ್ತು ಇತರ ಬಂಡಾಯ ಕಾಂಗ್ರೆಸ್ ಶಾಸಕರ ವಿರುದ್ಧ ಸೋಮವಾರ ತನಕ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದೆ. ಸ್ಪೀಕರ್ ಅನರ್ಹತೆ ನೋಟಿಸ್ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಸೋಮವಾರದಿಂದ ಪುನರಾರಂಭಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ