ಚಿದಂಬರಂಗೆ ಜಾಮೀನು ಬೇಡವೇ ಬೇಡ: ಸಿಬಿಐ
Team Udayavani, Sep 21, 2019, 4:30 AM IST
ಹೊಸದಿಲ್ಲಿ: ಐಎನ್ಎಕ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಪಿ. ಚಿದಂಬರಂಗೆ ಜಾಮೀನು ಕೊಡಲೇಬಾರದು ಎಂದು ಸಿಬಿಐ ದಿಲ್ಲಿ ಹೈಕೋರ್ಟ್ ನಲ್ಲಿ ಒತ್ತಾಯಿಸಿದೆ. ಇದೊಂದು ಅತ್ಯಂತ ಗಂಭೀರ ಆರ್ಥಿಕ ಅಪರಾಧವಾಗಿದೆ. ಹೀಗಾಗಿ, ಅವ ರಿಗೆ ಜಾಮೀನು ನೀಡಿದರೆ ತನಿ ಖೆಯ ಮೇಲೆ ಪ್ರಭಾವ ಬೀರಲಿದೆ ಎಂದು ಹೈಕೋರ್ಟ್ಗೆ ಅರಿಕೆ ಮಾಡಿದೆ. ಇದೊಂದು ಸಾರ್ವ ಜನಿಕ ನಂಬಿಕೆ ಮೇಲೆ ಬರೆ ಎಳೆದ ಪ್ರಕರಣ ಇದಾಗಿದೆ ಎಂದಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳು ಕೇವಲ ದುರುದ್ದೇಶದಿಂದ ಕೂಡಿದೆ. ಜತೆಗೆ ರಾಜಕೀಯ ಪ್ರತೀಕಾರ ತೀರಿಸುವ ಉದ್ದೇಶದ್ದಾಗಿದೆ ಎಂದು ಚಿದು ತಮ್ಮ ಜಾಮೀನು ಅರ್ಜಿಯಲ್ಲಿ ವಾದಿಸಿದ್ದಾರೆ.
ಐಎನ್ಎಕ್ಸ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಆ. 23ರಂದು ಹೊಸದಿಲ್ಲಿಯಲ್ಲಿ ಸಿಬಿಐ ಬಂಧಿಸಿತ್ತು. ಸದ್ಯ ಅವರನ್ನು ಅ. 3ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ವಿಶೇಷ ಕೋರ್ಟ್ ಈಗಾಗಲೇ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ