ಹಿಂದೂ ದೇವತೆ, ಅಮಿತ್ ಶಾ ಅವಹೇಳನ ಪ್ರಕರಣ; ಹಾಸ್ಯ ನಟ ಮುನಾವರ್ ಬೇಲ್ ಗೆ ನಕಾರ
ಕಾಮಿಡಿ ಶೋನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಸಾಧ್ಯತೆ ಹೆಚ್ಚಿದೆ
Team Udayavani, Jan 28, 2021, 12:50 PM IST
ಭೋಪಾಲ್: ಕಾಮಿಡಿ ಶೋನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಹಾಸ್ಯ ಕಲಾವಿದ ಮುನಾವರ್ ಫಾರೂಖಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಗುರುವಾರ(ಜನವರಿ 26, 2021) ಮಧ್ಯಪ್ರದೇಶ ಹೈಕೋರ್ಟ್ ತಿಳಿಸಿದೆ.
ಇದನ್ನೂ ಓದಿ:ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ಪ್ರಕರಣದಲ್ಲಿ ಅಪರಾಧ ಎಸಗಿರುವ ಬಗ್ಗೆ ಈವರೆಗೆ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ ಎಂದಿರುವ ಕೋರ್ಟ್, ತನಿಖೆ ಪ್ರಗತಿಯಲ್ಲಿದ್ದು, ದೋಷಾರೋಪದ ಕುರಿತು ಹೆಚ್ಚಿನ ಪುರಾವೆ ಬೇಕಾಗಿದೆ. ಈ ವೇಳೆ ತಾನು ಕಾಮಿಡಿ ಶೋನಲ್ಲಿ ಯಾವುದೇ ನೋವುಂಟು ಮಾಡುವ ಹೇಳಿಕೆ ನೀಡಿಲ್ಲ ಎಂಬ ಮುನಾವರ್ ವಾದವನ್ನು ಕೋರ್ಟ್ ತಳ್ಳಿಹಾಕಿರುವುದಾಗಿ ವರದಿ ವಿವರಿಸಿದೆ.
ಕಾಮಿಡಿ ಶೋನಲ್ಲಿ ಹಿಂದೂ ದೇವರುಗಳ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಜನವರಿ 2ರಂದು ಮುನಾವರ್ ಹಾಗೂ ಇತರ ನಾಲ್ಕು ಹಾಸ್ಯನಟರನ್ನು ಬಂಧಿಸಲಾಗಿತ್ತು.
ಇಂದೋರ್ ನ ಮಾಜಿ ಮೇಯರ್ ಮಾಲಿನಿ ಗೌರ್ ಹಾಗೂ ಸ್ಥಳೀಯ ಬಿಜೆಪಿ ಶಾಸಕನ ಪುತ್ರ ಏಕಲವ್ಯ ಸಿಂಗ್ ಗೌರ್ ನೀಡಿರುವ ದೂರಿನ ಮೇಲೆ ಮುನಾವರ್ ಫಾರೂಖಿ, ನಳಿನ್ ಯಾದವ್, ಎಡ್ವಿನ್ ಅಂಥೋನಿ, ಪ್ರಖರ್ ವ್ಯಾಸ್ ಮತ್ತು ಪ್ರಿಯಂ ವ್ಯಾಸ್ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.
ಕಾಮಿಡಿ ಶೋ ಆಯೋಜಿಸಿದ್ದ ಆಯೋಜಕರು ಮುನಾವರ್ ಅವರನ್ನು ಕರೆಯಿಸಿದ್ದು, ಅವರು ಕೂಡಾ ಹಾಜರಿದ್ದರು. ಆದರೆ ಆ ಸಂದರ್ಭದಲ್ಲಿ ಯಾವುದೇ ಅವಹೇಳನಕಾರಿ ಹೇಳಿಕೆ ಕೊಟ್ಟಿಲ್ಲ ಎಂದು ಮುನಾವರ್ ಪರ ವಕೀಲರು ವಾದಿಸಿದ್ದರು.
ಆದರೆ ವಾದವನ್ನು ಕೋರ್ಟ್ ತಿರಸ್ಕರಿಸಿದ್ದು, ಕಾಮಿಡಿ ಶೋನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಸಾಧ್ಯತೆ ಹೆಚ್ಚಿದ್ದು, ತನಿಖೆ ಪ್ರಗತಿ ಹಂತದಲ್ಲಿರುವುದರಿಂದ ಆರೋಪ ತಳ್ಳಿಹಾಕುವಂತಿಲ್ಲ ಎಂದು ಪೀಠ ತಿಳಿಸಿದೆ.
ಇಂದೋರ್ ನ ಹೋಟೆಲ್ ವೊಂದರಲ್ಲಿ ಹೊಸ ವರ್ಷದ ಪ್ರಯುಕ್ತ ಹಾಸ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರಂಭದಲ್ಲಿ ಅಮಿತ್ ಶಾ ಅವರನ್ನು ಅವಹೇಳನ ಮಾಡಿ, ನಂತರ ಹಿಂದೂ ದೇವರನ್ನು ಅವಮಾನಿಸಿರುವುದು ಸರಿಯಲ್ಲ ಎಂದು ಕಾರ್ಯಕ್ರಮದ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಗೌರ್ ಸ್ನೇಹಿತರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್