ಜಾಮೀನು ಅರ್ಜಿ ನಾಳೆ ವಿಚಾರಣೆ; ಡಿಕೆ ಶಿವಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನ
Team Udayavani, Sep 17, 2019, 5:28 PM IST
ನವದೆಹಲಿ: ಜಾರಿ ನಿರ್ದೇಶನಾಲಯದ ವಶದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ 14 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ.ನಾಳೆ ಮಧ್ಯಾಹ್ನ 3ಗಂಟೆಗೆ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಇ.ಡಿ ಪರ ಕೆಎಂ ನಟರಾಜ್ ವಾದ ಮಂಡಿಸಿದ್ದು, ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.
ಸೆಕ್ಷನ್ 45ರ ಅಡಿ ಪ್ರಾಸಿಕ್ಯೂಷನ್ ಗೆ ಜಾಮೀನು ವಿರೋಧಿಸಸುವ ಅಧಿಕಾರ ಇದೆ. ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಆದೇಶ ಉಲ್ಲೇಖಿಸಿದ್ದ ಸಿಂಘ್ವಿ. ಆಸ್ತಿ ಮೌಲ್ಯ ಹೆಚ್ಚಾಗಿದ್ದು ಅಧಿಕಾರಿಗಳಿಗೆ ಅರ್ಥವಾಗುತ್ತಿಲ್ಲವೇ?
ಡಿಕೆಶಿ ಪರ ಮುಕುಲ್ ರೋಹ್ಟಗಿ ವಾದ;
ಡಿಕೆ ಶಿವಕುಮಾರ್ ಏಳು ಬಾರಿ ಶಾಸಕರಾಗಿದ್ದಾರೆ. ಒಂದು ಪಕ್ಷದ ನಾಯಕರಾಗಿದ್ದಾರೆ. ಡಿಕೆ ಶಿವಕುಮಾರ್ ಒಬ್ಬ ಪಬ್ಲಿಕ್ ಫಿಗರ್. ಡಿಕೆಶಿ ಮನೆಯಲ್ಲಿ 41 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ ಎಂದು ಡಿಕೆಶಿ ಪರವಾಗಿ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು.
ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ತುಂಬಾ ಏರುಪೇರಾಗಿದೆ. ಪಿಎಂಎಎಲ್ ಕೇಸ್ ಯಾಕೆ ಹಾಕಿದ್ದಾರೆಂದು ಗೊತ್ತಾಗ್ತಿಲ್ಲ. ಇದು ಕೇಂದ್ರ ಸರಕಾರ ರದ್ದು ಮಾಡಿರುವ ಕಾಯ್ದೆ. ರದ್ದಾಗಿರುವ ಸೆಕ್ಷನ್ ಅನ್ನು ಕೇಂದ್ರ ಸರಕಾರ ಸಿಂಧು ಮಾಡಲು ಪ್ರಯತ್ನಿಸುತ್ತಿದೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ಜಾಮೀನು ನೀಡಲೇಬೇಕು ಎಂದು ರೋಹ್ಟಗಿ ವಾದಿಸಿದ್ದರು.
ಯಾವುದೇ ಷರತ್ತು ಬೇಕಿದ್ರೆ ಹಾಕಿ, ಆದರೆ ಡಿಕೆಶಿಗೆ ಜಾಮೀನು ಕೊಡಿ. ಈ ಪ್ರಕರಣದಲ್ಲಿ ಗರಿಷ್ಠ 7 ವರ್ಷ ಮಾತ್ರ ಶಿಕ್ಷೆಗೆ ಅವಕಾಶವಿದೆ. ಡಿಕೆಶಿಯನ್ನು ಜೈಲಿಗೆ ಕಳುಹಿಸಲು ಸೆಕ್ಷನ್ 120 ಸೇರಿಸಿದ್ದಾರೆ ಎಂದು ರೋಹ್ಟಗಿ ವಾದಿಸಿದರು.
ನ್ಯಾಯಾಂಗ ಬಂಧನದ ಅವಶ್ಯಕತೆ ಇದೆ; ಇ.ಡಿ ವಾದ
ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸಾಕ್ಷಿಗಳ ಆಧಾರದಲ್ಲಿ ವಿಚಾರಣೆ ನಡೆಯುತ್ತಿದೆ. 8.5ಕೋಟಿ ಹಣಕ್ಕೆ ಡಿಕೆಶಿ ಪರೋಕ್ಷವಾಗಿ ಹಿಡಿತ ಹೊಂದಿದ್ದಾರೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಅವಶ್ಯಕತೆ ಇದೆ ಎಂದು ಇ.ಡಿ.ಪರ ವಕೀಲರಾದ ನಟರಾಜ್ ಪ್ರತಿವಾದ ಮಂಡಿಸಿದ್ದರು.
9 ಮಂದಿಗೆ ಸಮನ್ಸ್ ನೀಡಿ ಹೇಳಿಕೆ ಪಡೆದಿದ್ದೇವೆ. ಲೆಕ್ಕಪತ್ರವಿಲ್ಲದ 143 ಕೋಟಿ ಅಕ್ರಮ ವ್ಯವಹಾರವಾಗಿದೆ. ಡಿಕೆಶಿ 41 ಲಕ್ಷ ರೂಪಾಯಿ ಮಾತ್ರ ತನ್ನದು ಎಂದು ಹೇಳುತ್ತಿದ್ದಾರೆ. ಬೇರೆ, ಬೇರೆ ಸ್ಥಳಗಳು ಡಿಕೆ ಶಿವಕುಮಾರ್ ಹಿಡಿತದಲ್ಲಿದ್ದವು. ಡಿಕೆ ಶಿವಕುಮಾರ್ ಗೆ ಮೆಡಿಕಲ್ ಸೌಲಭ್ಯ ಒದಗಿಸಲಾಗಿದೆ. ಆರೋಪಿಗಳು ಎಲ್ಲರೂ ಸೇರಿ ಕ್ರಿಮಿನಲ್ ಒಳಸಂಚು ನಡೆಸಿದ್ದಾರೆ.
23 ವರ್ಷದ ಮಗಳು 108 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದಾರೆ ಎಂದರೆ ನಂಬಲು ಸಾಧ್ಯವೇ? ಡಿಕೆಶಿ ಬೇರೆ, ಬೇರೆ ಕಡೆ ಹಣ ಹೂಡಿಕೆ ಮಾಡಿದ್ದಾರೆ. ಕುಟುಂಬಸ್ಥರು, ಆಪ್ತರ ಮೂಲಕ ಹಣದ ವ್ಯವಹಾರ ನಡೆದಿದೆ. 20 ಬ್ಯಾಂಕ್ ಗಳಲ್ಲಿ 317 ಖಾತೆ ಮೂಲಕ ವ್ಯವಹಾರ ನಡೆಸಿದ್ದಾರೆ. ಬ್ಯಾಂಕ್ ಖಾತೆ ವಿವರ ನೀಡಲು ಇದು ವಿಚಾರಣೆಯಲ್ಲ ಎಂದು ವಾದಿಸಿದ್ದರು.
ಅರ್ಧ ಗಂಟೆಯಲ್ಲಿ ವಾದ ಮುಗಿಸಿ; ಇ.ಡಿ ವಕೀಲರಿಗೆ ಜಡ್ಜ್ ಸೂಚನೆ
ಜಾಮೀನು ನೀಡುವಿಕೆ ವಿಚಾರದಲ್ಲಿ ಒಂದು ಗಂಟೆ ವಾದ ಮಂಡಿಸಲು ಇ.ಡಿ ಪರ ವಕೀಲರಾದ ನಟರಾಜ್ ಅವಕಾಶ ಕೇಳಿದ್ದರು. ಆದರೆ ಅರ್ಧ ಗಂಟೆಯಲ್ಲಿ ವಾದ ಮಂಡನೆ ಮುಗಿಸುವಂತೆ ಜಡ್ಜ್ ಸೂಚನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ