ವಿಶ್ವಸಂಸ್ಥೆಯಲ್ಲಿ ಹಿಂದಿಯಿಂದ ಯಾವುದೇ ಲಾಭವಿಲ್ಲ: ತರೂರ್
Team Udayavani, Jan 29, 2018, 6:40 AM IST
ಜೈಪುರ: ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕೃತ ಭಾಷೆ ಹಿಂದಿ ಎಂದು ಕೇಂದ್ರ ಸರ್ಕಾರ ದಾಖಲಿಸಲು ಪ್ರಯತ್ನಿಸುತ್ತಿದೆ. ಆದರೆ ವಿಶ್ವಸಂಸ್ಥೆಯಲ್ಲಿರುವ ಯಾರಿಗೂ ಹಿಂದಿ ಮಾತನಾಡಲು ಬಾರದು. ಇದರಿಂದ ಯಾವ ಪ್ರಯೋಜನವೂ ಇಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಈ ಹಿಂದೆ ಹಿಂದಿಯನ್ನು ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕೃತ ಭಾಷೆ ಎಂದು ದಾಖಲಿಸುವ ಸಂಬಂಧ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಶಶಿ ತರೂರ್ ಮಧ್ಯೆ ಲೋಕಸಭೆಯಲ್ಲಿ ವಾಗ್ವಾದ ನಡೆದಿತ್ತು.
ಈಗ ಮತ್ತೂಮ್ಮೆ ಈ ವಿಷಯವನ್ನು ಜೈಪುರ ಸಾಹಿತ್ಯ ಸಮ್ಮೇಳನದಲ್ಲಿ ಪ್ರಸ್ತಾಪಿಸಿದ ಶಶಿ ತರೂರ್, ಸರ್ಕಾರ ಇದಕ್ಕಾಗಿ 400 ಕೋಟಿ ರೂ. ವೆಚ್ಚ ಮಾಡಲು ತಯಾರಾಗಿದೆ. ಆದರೆ ಇದರಿಂದ ಭಾರತದ ಅಧಿಕಾರಿಗಳಿಗೇ ಕಷ್ಟವಾಗುತ್ತದೆ. ಅಲ್ಲದೆ ಹಲವು ನಾಯಕರು ದೇಶದ ವಿವಿಧ ಪ್ರದೇಶದವರಾಗಿರುತ್ತಾರೆ. ಉದಾಹರಣೆಗೆ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಮಾತೃಭಾಷೆ ಹಿಂದಿಯಲ್ಲ. ಇವರು ವಿಶ್ವಸಂಸ್ಥೆಯಲ್ಲಿ ಮಾತನಾಡುವ ಪ್ರಸಂಗ ಉಂಟಾದಾಗ ಕಷ್ಟವಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ