ಅಜಿತ್ ಯಾಕೆ ರಾಜೀನಾಮೆ ಕೊಟ್ಟರೋ ನನಗೆ ಗೊತ್ತಿಲ್ಲ: ಶರದ್ ಪವಾರ್
Team Udayavani, Sep 28, 2019, 8:55 AM IST
ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಶುಕ್ರವಾರ ದಿಢೀರನೆ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರದಲ್ಲಿ ಮಾತನಾಡಿರುವ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರು ರಾಜೀನಾಮೆ ನೀಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ ಅಜಿತ್ ಪವಾರ್ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಯಾರ ಕೈಗೂ ಸಿಗದಂತೆ ಅಜ್ಞಾತವಾಗಿದ್ದಾರೆ. ಅಜಿತ್ ನಿರ್ದೇಶಕರಾಗಿರುವ ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಅಳಿಯ ಅಜಿತ್ ರಾಜೀನಾಮೆ ನಿಡುವ ಮೊದಲು ಅಥವಾ ನಂತರ ನನಗೆ ಮಾಹಿತಿ ತಿಳಿಸಿಲ್ಲ. ಇಡಿ ಅಧಿಕಾರಿಗಳು ಅಜಿತ್ ಹೆಸರನ್ನು ಕೂಡಾ ಪ್ರಕರಣದಲ್ಲಿ ಸೇರಿಸಿರುವುದರಿಂದ ಆತ ಆತಂಕಕ್ಕೆ ಒಳಗಾಗಿದ್ದಾನೆ ಎಂದು ಆತನ ಮಗನಿಂದ ನನಗೆ ತಿಳಿಯಿತು ಎಂದು ಶರದ್ ಪವಾರ್ ಹೇಳಿದ್ದಾರೆ.
ಜಾರಿ ನಿರ್ದೇಶನಾಲಯವು ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರ ಮೇಲೆ ಪ್ರಕರಣ ದಾಖಲಿಸಿತ್ತು. ಈ ಹಗರಣದಲ್ಲಿ ಅಜಿತ್ ಪವಾರ್ ಅವರ ಹೆಸರು ಕೂಡಾ ತಳುಕು ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ